ಸೋರೆಕಾಯಿಯಲ್ಲಿದೆ ಅನೇಕ ಆರೋಗ್ಯಕರ ಗುಣಗಳು..! ಇಲ್ಲಿದೆ ಮಾಹಿತಿ

Date:

ಸೋರೆಕಾಯಿಯಲ್ಲಿದೆ ಅನೇಕ ಆರೋಗ್ಯಕರ ಗುಣಗಳು..! ಇಲ್ಲಿದೆ ಮಾಹಿತಿ

ಸೋರೆಕಾಯಿಯನ್ನು ಬೇಸಿಗೆಯಲ್ಲಿ ಬಹಳಷ್ಟು ಜನರು ತಿನ್ನುತ್ತಾರೆ. ಸಾಮಾನ್ಯವಾಗಿ ಸೋರೆಕಾಯಿಯನ್ನು ಹಲ್ವಾ, ಪಲ್ಯ, ಕರಿ, ಸಾಂಬಾರ್ ರೂಪದಲ್ಲಿ ಹೆಚ್ಚು ಸೇವಿಸಲಾಗುತ್ತದೆ. ಎಲ್ಲರ ಕೈಗೆಟಕುವ ಸೋರೆಕಾಯಿ ತೂಕ ಇಳಿಸಿಕೊಳ್ಳಲು ಸಹ ಸಹಾಯ ಮಾಡುವುದಲ್ಲದೆ, ಅನೇಕ ಕಾಯಿಲೆಗಳಿಗೆ ಮದ್ದಾಗಿದೆ. ಎದೆಯುರಿ, ದೇಹದಲ್ಲಿ ನೀರಿನ ಕೊರತೆ, ಶಾಖದಿಂದ ತಲೆಸುತ್ತು, ಉಸಿರಾಟದ ತೊಂದರೆ ಇಂತಹ ಹಲವು ಸಮಸ್ಯೆಗಳಿಂದ ಸೋರೆಕಾಯಿ ಕಾಪಾಡುತ್ತದೆ.
-ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ: ಸೋರೆಕಾಯಿ ತಿನ್ನುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
-ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಮಸ್ಯೆಯಲ್ಲೂ ನೀವು ಪ್ರಯೋಜನವನ್ನು ಪಡೆಯಬಹುದು. ನಿತ್ಯ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿದರೆ ಕೂದಲು ಬೆಳೆಯುವುದರ ಜೊತೆಗೆ ಅದು ಬಿಳಿಯಾಗುವುದನ್ನು ತಡೆಯಬಹುದು ಎಂದು ಹೇಳಲಾಗುತ್ತದೆ.
–ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ: ಸೋರೆಕಾಯಿ ತೂಕವನ್ನು ಕಡಿಮೆ ಮಾಡಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಬಾಟಲ್ ಸೋರೆಕಾಯಿಯಲ್ಲಿ ವಿಟಮಿನ್-ಸಿ, ಸೋಡಿಯಂ, ಫೈಬರ್ ಮತ್ತು ಕಬ್ಬಿಣದ ಸಮೃದ್ಧವಾಗಿದೆ. ಇದರ ಸೇವನೆಯಿಂದ ನಿಮ್ಮ ತೂಕವನ್ನು ಆರೋಗ್ಯಕವಾಗಿ ಕಡಿಮೆ ಮಾಡಬಹುದು.
-ಮೂಳೆಗಳು ಸಹ ಬಲವಾಗಿರುತ್ತವೆ: ಸೋರೆಕಾಯಿಯನ್ನು ತಿನ್ನುವುದು ಮೂಳೆಗಳನ್ನು ಬಲಪಡಿಸುತ್ತದೆ. ಏಕೆಂದರೆ ಅದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಪೋಷಕಾಂಶಗಳು ಕಂಡುಬರುತ್ತವೆ, ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ.
-ಒತ್ತಡವೂ ಕಡಿಮೆ : ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಹೆಚ್ಚಿನ ಜನರು ಒತ್ತಡದಲ್ಲಿ ಬದುಕುತ್ತಾರೆ. ಇದು ಅನೇಕ ರೋಗಗಳಿಗೆ ಆಹ್ವಾನ ನೀಡಿದಂತೆ ಎಂದರೂ ತಪ್ಪಾಗಲಾರದು. ಆದರೆ, ಸೋರೆಕಾಯಿ ಸೇವನೆಯಿಂದ ಒತ್ತಡವೂ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...