ಇಂದು ಕೋಲ್ಕತ್ತ ನೈಟ್ ರೈಡರ್ಸ್, ಆರ್ಸಿಬಿ ಮಧ್ಯೆ ಫೈಟ್: ಬೆಂಗಳೂರು ತಂಡದಲ್ಲಿ ಯಾರೆಲ್ಲ ಇರ್ತಾರೆ ಗೊತ್ತಾ..?

Date:

ಇಂದು ಕೋಲ್ಕತ್ತ ನೈಟ್ ರೈಡರ್ಸ್, ಆರ್ಸಿಬಿ ಮಧ್ಯೆ ಫೈಟ್: ಬೆಂಗಳೂರು ತಂಡದಲ್ಲಿ ಯಾರೆಲ್ಲ ಇರ್ತಾರೆ ಗೊತ್ತಾ..?

ಬೆಂಗಳೂರು: ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆಯಲಿದೆ.
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್ಸಿಬಿ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್ಆರ್ಹೆಚ್ ಅಥವಾ ಎಲ್ಎಸ್ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.
ಆರ್‌ಸಿಬಿಯ ಸಂಭಾವ್ಯ ಆಡುವ XI:
ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್, ಸುಯಾಶ್ ಶರ್ಮಾ.
ಕೆಕೆಆರ್‌ನ ಸಂಭಾವ್ಯ ಆಡುವ XI:
ಸುನಿಲ್ ನರೈನ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಮನೀಶ್ ಪಾಂಡೆ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮೊಯಿನ್ ಅಲಿ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...