ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ಮೆದುಳು ನಿಷ್ಕ್ರಿಯ!
ಬೆಂಗಳೂರು ಗ್ರಾಮಾಂತರ: ನಡೆದುಕೊಂಡು ಆಸ್ವತ್ರೆಗೆ ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಖಾಸಗಿ ಆಸ್ವತ್ರೆಯಲ್ಲಿ ನಡೆದಿದೆ. ಹೊಸಕೋಟೆಯ ಕೋನಪ್ಪ ( 52 ) ಬ್ರೈನ್ ಡೆಡ್ ಆದ ವ್ಯಕ್ತಿಯಾಗಿದ್ದು, ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದ ಕೋನಪ್ಪ, ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಆಸ್ಪತ್ರೆಗೆ ಬಂದಿದ್ದಾರೆ.
ಈ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ. ವ್ಯಕ್ತಿ ಆಸ್ವತ್ರೆಗೆ ನಡೆದುಕೊಂಡು ಬರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇತ್ತೀಚೆಗೆ ಕಾರ್ಡಿಯಾಕ್ ಅರೆಸ್ಟ್ನಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಈ ಬಗ್ಗೆ ವೈದ್ಯರು ಹೇಳಿದ್ದಾರೆ.