ಗಾಳಿ ಮಳೆ ನಡುವೆಯೇ ಮೆಸ್ಕಾಂ ನೌಕರನ ಧೈರ್ಯ: ಕಂಬ ಏರಿ ದುರಸ್ತಿ ಕಾರ್ಯ!

Date:

ಗಾಳಿ ಮಳೆ ನಡುವೆಯೇ ಮೆಸ್ಕಾಂ ನೌಕರನ ಧೈರ್ಯ: ಕಂಬ ಏರಿ ದುರಸ್ತಿ ಕಾರ್ಯ!

ಕಳಸ: ಭಾರೀ ಗಾಳಿ ಮಳೆ ಮಧ್ಯೆಯೂ ಮೆಸ್ಕಾಂ ನೌಕರರೊಬ್ಬರು ಎತ್ತರದ ಕಂಬ ಹತ್ತಿ ವಿದ್ಯುತ್ ದುರಸ್ಥಿ ಕಾರ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಜರುಗಿದೆ.

ಕಳಸ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಕೈ ಕೊಟ್ಟಿತ್ತು. ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ಕಂಬಗಳಲ್ಲಿ ಸಮಸ್ಯೆ ಪದೇ ಪದೇ ತಲೆದೋರುವುದು ಸಾಮಾನ್ಯವಾಗಿದೆ. ವಿದ್ಯುತ್ ಇಲ್ಲದ ವಿಷಯ ಕರೆ ಮಾಡಿ ಮೆಸ್ಕಾಂ ಕಚೇರಿಗೆ ತಿಳಿಸಿದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ನೌಕರರೊಬ್ಬರು ಜೋರಾಗಿ ಸುರಿಯುವ ಮಳೆಯ ನಡುವೆಯೇ ವಿದ್ಯುತ್ ಕಂಬ ಏರಿ ದುರಸ್ತಿ ಕಾರ್ಯ ಮಾಡಿದ್ದಾರೆ.‌ ಅಲ್ಯೂಮಿನಿಯಂ ಏಣಿ ಏರಿ ವಿದ್ಯುತ್ ದುರಸ್ತಿ ನಡೆಸಿದ್ದಾರೆ. ನೌಕರನ ಶಿಸ್ತಿನ ಕಾರ್ಯಕ್ಕೆ ಕಳಸ ಪಟ್ಟಣದ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...