ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಆರ್ಸಿಬಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒಪ್ಪಿಗೆ ನೀಡಲಾಗಿದೆ.
ನ್ಯಾ. ಮೈಕಲ್ ಡಿ. ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದ್ದು, ಅದರ ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ವರದಿಯಲ್ಲಿ ಕಾರ್ಯಕ್ರಮದ ಆಯೋಜಕರ ನಿರ್ಲಕ್ಷ್ಯ, ಪೊಲೀಸರು ತೋರಿದ ವೈಫಲ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಶಿಫಾರಸು ಮಾಡಲಾಗಿದೆ.