No menu items!
11.8 C
Munich
Friday, May 8, 2026

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: SITಗೆ ಪ್ರಕರಣ ವರ್ಗಾವಣೆ

Must read

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: SITಗೆ ಪ್ರಕರಣ ವರ್ಗಾವಣೆ
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹಗಳು ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ಸಂಬಂಧ, ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ರಚಿಸಲು ಆದೇಶಿಸಿದೆ. ಜುಲೈ 19 ರಂದು ಸರ್ಕಾರ ನೀಡಿದ ಆದೇಶದ ಪ್ರಕಾರ, ಈ ಪ್ರಕರಣವನ್ನು SIT ತನ್ನ ಕೈಗಾರಿಕೆಗೆ ತೆಗೆದುಕೊಂಡು ತನಿಖೆ ನಡೆಸಲಿದೆ.
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರ ಹೇಳಿಕೆಯಲ್ಲಿ, “ಶೀಘ್ರದಲ್ಲೇ SIT ಪ್ರಕರಣವನ್ನು ತನಿಖೆಗೆ ತೆಗೆದುಕೊಳ್ಳಲಿದೆ” ಎಂದು ತಿಳಿಸಿದ್ದಾರೆ.
SIT ರಚನೆಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳಾದ ಪ್ರಣವ ಮೋಹಾಂತಿ (SIT ಮುಖ್ಯಸ್ಥ), ಎಂ.ಎನ್. ಅನುಚೇತ್, ಸೌಮ್ಯಲತ, ಹಾಗೂ ಜಿತೇಂದ್ರ ಕುಮಾರ್ ದಯಾಮ ರವರಿಗೆ SIT ಸದಸ್ಯರಾಗಿ ನೇಮಕ ಮಾಡಿದೆ. ಈ ವಿಚಾರವಾಗಿ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಲು ತನಿಖೆ ಮುಂದುವರೆದಿದೆ.

- Advertisement -spot_img

More articles

- Advertisement -spot_img

Latest article