ಧಾರವಾಡ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಬೇಡಿ; ಭಕ್ತರ ಒತ್ತಾಯ

Date:

ಧಾರವಾಡ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಬೇಡಿ; ಭಕ್ತರ ಒತ್ತಾಯ

ಧಾರವಾಡ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ ಇಂದಿನಿಂದ ನಡೆಸಲಿದೆ ಮತ್ತೊಂದೆಡೆ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ತನಿಖೆ ನಡೆಸುತ್ತಿರುವುದು ಸೂಕ್ತವೇ ಆದರೂ ಈ ತನಿಖೆ ನೆಪದಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆ ಅಪಪ್ರಚಾರ ಮಾಡಬಾರದು ಎಂದು ಧಾರವಾಡದ ಭಕ್ತರು ಆಗ್ರಹಿಸಿದ್ದಾರೆ.
ಭಕ್ತರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರಾದ ಸವಿತಾ ಅಮರಶೆಟ್ಟಿ, ಸರ್ಕಾರದ ಈ ತನಿಖೆ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಧರ್ಮಸ್ಥಳ ಒಂದು ಪವಿತ್ರ ಧಾರ್ಮಿಕ ಹಾಗೂ ಶಕ್ತಿ ಕೇಂದ್ರ. ಅಲ್ಲಿ ನಡೆದಿವೆ ಎನ್ನಲಾದ ಅಸಜ ಸಾವಿನ ಬಗ್ಗೆ ನಾವು ಕೇಳಿದ್ದೇವೆ. ಅದು ತನಿಖೆ ಕೂಡ ಆಗುತ್ತಿದೆ. ಆದರೆ, ಅದೇ ನೆಪದಲ್ಲಿ ದೇವಸ್ಥಾನದ ಬಗ್ಗೆ ಅಪಪ್ರಚಾರ ಮಾಡುವುದು ಬೇಡ ಎಂದರು.
ಎಸ್ಐಟಿ ತನಿಖೆ ನಡೆಯುತ್ತಿದೆ. ಅದನ್ನು ಅನೇಕರು ಸ್ವಾಗತಿಸಿದ್ದಾರೆ. ಯಾರು ತಪ್ಪಿತಸ್ಥರೋ ಅವರಿಗೆ ಶಿಕ್ಷೆಯಾಗಲಿ. ಕಾನೂನಿಗೆ ಎಲ್ಲರೂ ಗೌರವ ಕೊಡಲೇಬೇಕು. ತನಿಖೆ ವರದಿ ಬರುವವರೆಗೂ ದೇವಸ್ಥಾನದ ಬಗೆಗಿನ ಅಪಪ್ರಚಾರ ನಿಲ್ಲಬೇಕು. ಧರ್ಮಸ್ಥಳ ಕ್ಷೇತ್ರದಿಂದ ಸಾಕಷ್ಟು ಸಾಮಾಜಿಕ ಕೆಲಸಗಳಾಗಿವೆ. ಈ ರೀತಿಯ ಅಪಪ್ರಚಾರದಿಂದ ಭಕ್ತರಿಗೆ ಸಾಕಷ್ಟು ನೋವಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...