ರಾಹುಲ್ ನೇತೃತ್ವದ ಪ್ರತಿಭಟನೆ ಮುಂದೂಡಿಕೆ: ಆಗಸ್ಟ್ 5ರ ಬದಲು ಆಗಸ್ಟ್ 8ಕ್ಕೆ

Date:

ರಾಹುಲ್ ನೇತೃತ್ವದ ಪ್ರತಿಭಟನೆ ಮುಂದೂಡಿಕೆ: ಆಗಸ್ಟ್ 5ರ ಬದಲು ಆಗಸ್ಟ್ 8ಕ್ಕೆ

 

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತ ಕಳ್ಳತನ ನಡೆದಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಂಸತ್‌ನಲ್ಲಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5ರಂದು ನಡೆಯಬೇಕಾದ ಪ್ರತಿಭಟನಾ ಸಮಾವೇಶವನ್ನು ಈಗ ಮುಂದೂಡಲಾಗಿದೆ.

‘‘ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’’ ಎಂಬ ಧ್ಯೇಯದಡಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳೂ ನಡೆದಿದ್ದರೂ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನ ಹಿನ್ನೆಲೆ, ಸಮಾವೇಶವನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಶಿಬು ಸೊರೇನ್ ಅವರಿಗೆ ಅಂತಿಮ ನಮನ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್‌ಗೆ ತೆರಳುತ್ತಿರುವುದರಿಂದ ಸಮಾವೇಶವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...