ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!
ಧಾರವಾಡ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ನಾಯಿಗಳ ಹಿಂಡು ಅವಳಿನಗರದ ಅನೇಕ ಕಡೆಗಳಲ್ಲಿ ಈಗಾಗಲೇ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ. ಆದರೆ, ಮಹಾನಗರ ಪಾಲಿಕೆ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ನಾಯಿಗಳ ಹಿಂಡು ಈ ರೀತಿ ಜೀವಂತ ಆಕಳ ಕರುವನ್ನೇ ಹರಿದು ಮುಕ್ಕಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಜರುಗಿದೆ.
ಈಗಾಗಲೇ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಅನೇಕರು ಪಾಲಿಕೆಗೆ ಮನವಿ ಮಾಡಿದ್ದಾರೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಇನ್ನೂ ಆಗಿಲ್ಲ. ದಿನೇ ದಿನೇ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಮುಂದೆ ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮುಂಚೆಯೇ ಮೇಯರ್ ಜ್ಯೋತಿ ಪಾಟೀಲ ಹಾಗೂ ಹಾಗೂ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.