ಸಿಲಿಂಡರ್ ಸ್ಫೋಟ: 8 ವರ್ಷದ ಬಾಲಕನ ಸಾವು – ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ

Date:

ಸಿಲಿಂಡರ್ ಸ್ಫೋಟ: 8 ವರ್ಷದ ಬಾಲಕನ ಸಾವು – ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ

 

ಬೆಂಗಳೂರು: ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ಘಟನೆ ಸಿಲಿಕಾನ್ ಸಿಟಿಯ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಈ ನಿಗೂಢ ಸ್ಫೋಟದಲ್ಲಿ 8 ವರ್ಷದ ಬಾಲಕ ಮುಬಾರಕ್ ದುರ್ಮರಣಕ್ಕೊಳಗಾಗಿದ್ದು, ಇನ್ನೂ 9 ಮಂದಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಸುತ್ತಮುತ್ತಲಿನ 13 ಮನೆಗಳು ಸ್ಫೋಟದ ತೀವ್ರತೆಗೆ ಧ್ವಂಸಗೊಂಡಿವೆ. ಹಾನಿಗೊಳಗಾದ ಮನೆಗಳ ಮರುನಿರ್ಮಾಣ ಕಾರ್ಯವನ್ನು ಸರ್ಕಾರವೇ ಹೊಣೆವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸ್ಫೋಟದ ಸುದ್ದಿ ತಿಳಿದ ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಧ್ಯಮಗಳಿಗೆ ಮಾತನಾಡಿದ ಅವರು, “ಇವತ್ತು ನಡೆದ ಘಟನೆ ಬಹಳ ಬೇಸರದ ಸಂಗತಿ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸ್ಫೋಟ ಎನ್ನಲಾಗಿದೆ. ಘಟನೆಯಲ್ಲಿ ಮುಬಾರಕ್ ಎಂಬ ಬಾಲಕನು ಪ್ರಾಣ ಕಳೆದುಕೊಂಡಿದ್ದಾನೆ. 9 ಜನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದರು. ಸಿಎಂ ಅವರು ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ!

ಹಾಲು-ನೀರು ಸರಿಯಾದರೂ ಟೀ ರುಚಿಯಾಗಿಲ್ಲವಾ? ಹಾಗಿದ್ರೆ ತಪ್ಪು ಇಲ್ಲಿದೆ ನೋಡಿ! ಭಾರತೀಯರ ಜೀವನದಲ್ಲಿ...

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...