Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Date:

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

ಬೆಂಗಳೂರು: ಬಾರ್‌ಗೆ ಕುಡಿಯಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದಲ್ಲಿನ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಮೇಘರಾಜ್ (31) ಎಂದು ಗುರುತಿಸಲಾಗಿದೆ.

ನಿನ್ನೆ ತಡರಾತ್ರಿ ಮೇಘರಾಜ್ ತನ್ನ ಸ್ನೇಹಿತರೊಂದಿಗೆ 1522 ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ. ಬಳಿಕ ಆತ ಬಾತ್‌ರೂಮ್‌ಗೆ ತೆರಳಿದ್ದರೂ, ಸಾಕಷ್ಟು ಹೊತ್ತಾದರೂ ಹೊರಬರಲಿಲ್ಲ. ಇದರಿಂದ ಅನುಮಾನಗೊಂಡ ಸ್ನೇಹಿತರು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿದಾಗ ಮೇಘರಾಜ್ ಶವವಾಗು ಪತ್ತೆಯಾಗಿದ್ದ.

ತಕ್ಷಣವೇ ಸ್ಥಳಕ್ಕೆ ಆರ್.ಆರ್. ನಗರ ಪೊಲೀಸರು ಮತ್ತು ಸೋಕೋ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ವರದಿಯ ಬಳಿಕ ಮಾತ್ರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರ್.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...