No menu items!
9.2 C
Munich
Friday, May 1, 2026

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

Must read

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

ಬೆಂಗಳೂರು: ರಾಜ್ಯದ ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್ ಬೆದರಿಕೆ ಬರುತ್ತಿರುವ ನಡುವೆಯೇ, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಗಳನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಹುಸಿ ಬೆದರಿಕೆ ಸಂದೇಶ ಬಂದಿದೆ.

ಈ ಇಮೇಲ್‌ನಲ್ಲಿ, ಸಿಎಂ ಮತ್ತು ಡಿಸಿಎಂ ನಿವಾಸಗಳಲ್ಲಿ ಆರು ಆರ್‌ಡಿಎಕ್ಸ್ ಬಾಂಬ್‌ಗಳು ಫಿಕ್ಸ್ ಮಾಡಲಾಗಿದೆ ಎಂದು ತಿಳಿಸಲಾಗಿದ್ದು, ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆಯ ಉದ್ದೇಶ ವ್ಯಕ್ತಪಡಿಸಲಾಗಿದೆ. ಈ ಮೂಲಕ ರಾಜ್ಯದ ಬಾಂಬ್ ಬೆದರಿಕೆ ಪ್ರಕರಣಗಳು ಮತ್ತೊಂದು ಹಂತ ತಲುಪಿವೆ.

ಇದೊಂದು ಹುಸಿ ಬೆದರಿಕೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ತಕ್ಷಣ ಬಾಂಬ್ ನಿಗ್ರಹ ದಳ ಉಭಯ ನಾಯಕರ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಯಾವುದೇ ಸ್ಪೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಸುಳ್ಳು ಬೆದರಿಕೆಯಾಗಿರುವುದು ದೃಢಪಟ್ಟಿದೆ.

ಈ ಬೆದರಿಕೆ ಸಂದೇಶವು aarna.ashwinshekher@outlook.com ಎಂಬ ಇ-ಮೇಲ್ ಐಡಿಯಿಂದ ಕಳಿಸಲಾಗಿದ್ದು, ತಮಿಳುನಾಡಿನ ವ್ಯಕ್ತಿಯೋರ್ವನಿಂದ ಕಳುಹಿಸಿರುವ ಸಾಧ್ಯತೆ. ಇಮೇಲ್ ಕಳಿಸಿರುವ ಶಂಕಿತನ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -spot_img

More articles

- Advertisement -spot_img

Latest article