ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ

Date:

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ

ಮಡಿಕೇರಿ: ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ದಂಡು ಹೆಚ್ಚುತ್ತಿದೆ. ವರ್ಷದಲ್ಲಿ ಒಂದೇ ಬಾರಿಗೆ ನಡೆಯುವ ಈ ಪವಿತ್ರ ತೀರ್ಥೋದ್ಭವದ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ತಲಕಾವೇರಿಗೆ ಆಗಮಿಸುತ್ತಿದ್ದಾರೆ.

ತಲಕಾವೇರಿ, ಕೊಡಗು ಜಿಲ್ಲೆಯ ಪವಿತ್ರ ಕ್ಷೇತ್ರವಾಗಿದ್ದು, ಇಲ್ಲಿ ಪ್ರತಿವರ್ಷ ನಿಗದಿತ ಸಮಯದಲ್ಲಿ ಕಾವೇರಿ ನದಿಯ ಮೂಲಸ್ರೋತದಿಂದ ನೀರು ಉಕ್ಕಿ ಹರಿಯುತ್ತದೆ. ಇದನ್ನು ತೀರ್ಥೋದ್ಭವ ಎಂದು ಕರೆಯಲಾಗುತ್ತದೆ. ಈ ಸಂದರ್ಭ ಭಕ್ತರು ತೀರ್ಥವನ್ನು ಪಡೆದು ಪುಣ್ಯಸ್ನಾನ ಮಾಡುವುದು ಸಂಪ್ರದಾಯ.

ಮಧ್ಯಾಹ್ನ 1:44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋಧ್ಭವ ಜರುಗಲಿದ್ದು, ಮುಂಜಾನೆಯಿಂದಲೇ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ‌  ನಾನಾ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಅರ್ಚಕರ ತಂಡ ಕೂಡ ಕಾವೇರಿಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಮುಂಜಾನೆಯಿಂದಲೆ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ.

ಮಾತೆಯ ದರ್ಶನಕ್ಕೆ ಸಹಸ್ರ ಸಹಸ್ರ ಭಕ್ತರು ಲಗ್ಗೆಯಿಡುತ್ತಿದ್ದು ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ತೀರ್ಥಸ್ವರೂಪಿಣಿಯಾದ ಕಾವೇರಿ ಮಾತೆಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದು ಒಂದು ತಿಂಗಳ ಜಾತ್ರೆಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...