ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

Date:

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ಕಾಂಗ್ರೆಸ್ ಮಹಾ ದೋಖಾ ಮಾಡುತ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಜೆಡಿಎಸ್ ಹೋರಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಈ ಬಗ್ಗೆ ಟ್ವೀಟ್ ಮೂಲಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರುರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಶುಭೋದಯ ಬೆಂಗಳೂರು ! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ, 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಆದ್ರೆ ಇದರ ಬಗ್ಗೆ ಚಿಂತಿಸಬೇಡಿ, ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ.
ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ನಾನು ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು: ರಾಜ್ಯದ...

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ ಮಧ್ಯಾಹ್ನ ಊಟದ ನಂತರ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು ಬೆಂಗಳೂರು:...

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ...