No menu items!
30.6 C
Munich
Wednesday, August 12, 2026

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

Must read

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಅದ್ದೂರಿಯಾಗಿ ಆರಂಭವಾಯಿತು. ವಿಧಾನಸಭೆಯ ಕಲಾಪವನ್ನು ಸ್ಪೀಕರ್ ಯು.ಟಿ. ಖಾದರ್ ಸಂವಿಧಾನದ ಪೀಠಿಕೆಯ ಪಠಣದ ಮೂಲಕ ಉದ್ಘಾಟಿಸಿದರು. ನಂತರ ರಾಷ್ಟ್ರೀಯ ಗೀತೆ ಹಾಗೂ ವಂದೇ ಮಾತರಂ ಗೀತೆಯನ್ನು ಸದಸ್ಯರು ಸಾಮೂಹಿಕವಾಗಿ ಹಾಡಿದರು.

ವಿಧಾನ ಪರಿಷತ್‌ನಲ್ಲೂ ಕಲಾಪ ಪ್ರಾರಂಭಗೊಂಡಿದ್ದು, ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್ ಮೇಟಿ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಹೊಸದಾಗಿ ಆಯ್ಕೆಯಾದ ಪರಿಷತ್ ಸದಸ್ಯರಾದ ಶಿವಕುಮಾರ್, ಆರತಿ ಕೃಷ್ಣ ಹಾಗೂ ಜಕ್ಕಪ್ಪ ಅವರನ್ನು ಆಡಳಿತ ಪಕ್ಷದ ನಾಯಕ ಬೋಸ್‌ರಾಜ್ ಸದನಕ್ಕೆ ಪರಿಚಯಿಸಿದರು.

ಈ ಅಧಿವೇಶನದಲ್ಲಿ ಮುಖ್ಯವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ, ರೈತರ ಸಮಸ್ಯೆಗಳು, ನೀರಾವರಿ ಯೋಜನೆಗಳು ಚರ್ಚೆಯ ಪ್ರಮುಖ ಅಂಶಗಳಾಗುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಲು ಸಜ್ಜಾಗಿದ್ದಾರೆ.

ಅಧಿವೇಶನದಲ್ಲಿ 20ಕ್ಕೂ ಹೆಚ್ಚು ವಿಧೇಯಕಗಳು ಮಂಡನೆಯಾಗಲಿದ್ದು, ಹೊರಗೆ 95ಕ್ಕೂ ಹೆಚ್ಚು ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಜ್ಜಾಗಿವೆ. MIS–ಶಿವಸೇನೆ ನೀಡಿರುವ ಎಚ್ಚರಿಕೆಯ ನಡುವೆಯೇ ಬೆಳಗಾವಿ ಮತ್ತೊಮ್ಮೆ ರಾಜಕೀಯ ರಣರಂಗದ ಕೇಂದ್ರವಾಗಲಿದೆ.

- Advertisement -spot_img

More articles

- Advertisement -spot_img

Latest article