ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

Date:

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಬೆಂಗಳೂರು: “ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳದ ವಿಚಾರದಲ್ಲಿ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವಂತಾದರೂ ತೀರ್ಮಾನ ಕೈಗೊಂಡಿದ್ದೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು ಪರಿಹಾರವಾಗುವಿವೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಕಬ್ಬು ಬೆಲೆ ಮತ್ತು ಮೆಕ್ಕೆಜೋಳದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಬಾಯಿ ಬಿಟ್ಟಿಲ್ಲ.

ಬಿಜೆಪಿ ಸಂಸದರೂ ರಾಜ್ಯದ ಸಮಸ್ಯೆಗಳ ಕುರಿತು ಧ್ವನಿ ಎತ್ತಿಲ್ಲ. ಬೊಮ್ಮಾಯಿ ಅವರು ರಾಜ್ಯವೇ ಖರೀದಿ ಮಾಡಲಿ ಎಂದು ಹೇಳುತ್ತಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾತ್ರವೇನು? ಪ್ರತಿಯೊಂದು ಬೆಲೆ ನಿಗದಿ ಮಾಡುವ ಅಧಿಕಾರ ಕೇಂದ್ರ ಸರ್ಕಾರದ್ದೇ. ಆದರೂ ಅವರಿಂದ ಯಾವುದೇ ತೀರ್ಮಾನ ಇಲ್ಲ,” ಎಂದು ಡಿಕೆಶಿ ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...