ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

Date:

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ಬೆಳಗಾವಿ: ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ, ಪರಿಷ್ಕೃತ ನಕ್ಷೆಗೆ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿದರು. ಪ್ರಸ್ತುತ, ಸದರಿ ಪ್ರಸ್ತಾವನೆಯು ಕರ್ನಾಟಕ ನಗರ & ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯಿದೆ ಅನುಸಾರ ಬಾಗಲಕೋಟೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರಿಶೀಲನಾ ಹಂತದಲ್ಲಿದ್ದು, ನಗರಾಭಿವೃದ್ಧಿ ಪ್ರಾಧಿಕಾರ, ಬಾಗಲಕೋಟೆ ಇವರ ಅನುಮೋದನೆ ನಂತರವೇ ನಿಯಾಮನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ ಬೆಂಗಳೂರು: ಮುಖ್ಯಮಂತ್ರಿ...