ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

Date:

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಚಳಿಯ ವಾತಾವರಣವನ್ನು ಅನುಭವಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿಯೂ ತೀವ್ರ ಚಳಿ ಮತ್ತು ಒಣಹವೆಯು ಇರುತ್ತದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟ ಮಂಜು ಕಾಣಿಸಿಕೊಳ್ಳಬಹುದು. ಹೀಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ಇಲಾಖೆಯು ಸೂಚಿಸಿದೆ. ಕಳೆದ ಕೆಲವು ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಏರುಪೇರಾಗುತ್ತಿದೆ. ಇಂದು ಬೆಂಗಳೂರಿನ ಕನಿಷ್ಠ ತಾಪಮಾನ 15°C ಮತ್ತು ಗರಿಷ್ಠ 28°C ಆಗಿರಲಿದೆ. ತೀವ್ರ ಚಳಿಯಿಂದ ಆರೋಗ್ಯ ಸಮಸ್ಯೆ ಎದುರಾಗಬಾರದಂತೆ, ವೈದ್ಯರು ಬೆಚ್ಚಗಿನ ಉಡುಪು ಹಾಕಲು ಹಾಗೂ ಬಿಸಿ ಆಹಾರ ಸೇವನೆ ಮಾಡಲು ಸಲಹೆ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು,

ವಿಜಯನಗರ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮಂಜು ಮತ್ತು ಚಳಿಯಿಂದ ಮಕ್ಕಳಿಂದ ವೃದ್ಧರವರೆಗೂ ಎಚ್ಚರಿಕೆಯಿಂದಿರಬೇಕು. ಹವಾಮಾನ ಇಲಾಖೆ ಬೆಚ್ಚಗಿನ ಉಡುಪು ಧರಿಸುವುದು ಮತ್ತು ಸಮತೋಲನ ಆಹಾರ ಸೇವಿಸುವಂತೆ ಸೂಚನೆ ನೀಡಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...