No menu items!
13.9 C
Munich
Wednesday, April 29, 2026

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Must read

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಇದರೊಂದಿಗೆ ಸೆಂಗಾರ್ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಪ್ರಕರಣದಲ್ಲಿ ಕಾನೂನಿನ ಮಹತ್ವದ ಪ್ರಶ್ನೆಗಳಿವೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಈ ಸಂಬಂಧ ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಲಾಗಿದೆ. ಹೈಕೋರ್ಟ್ ಆದೇಶವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಸುಪ್ರೀಂ ಕೋರ್ಟ್, ಸೆಂಗಾರ್ ಜೈಲಿನಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರು ಈಗಾಗಲೇ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವುದನ್ನೂ ನ್ಯಾಯಾಲಯ ಉಲ್ಲೇಖಿಸಿದೆ.

ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದ ವ್ಯಾಖ್ಯಾನ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಹೈಕೋರ್ಟ್ ವ್ಯಾಖ್ಯಾನವನ್ನು ಒಪ್ಪಿಕೊಂಡರೆ, ಸಾಮಾನ್ಯ ಪೊಲೀಸ್ ಸಿಬ್ಬಂದಿ ಅಥವಾ ಪಟವಾರಿ ಕೂಡ ‘ಸಾರ್ವಜನಿಕ ಸೇವಕ’ರಾಗಬಹುದು. ಆದರೆ ಶಾಸಕರು ಅಥವಾ ಸಂಸದರು ಆ ವ್ಯಾಖ್ಯಾನದಿಂದ ಹೊರಗುಳಿದು ವಿನಾಯಿತಿ ಪಡೆಯುವಂತಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಅಭಿಪ್ರಾಯಪಟ್ಟರು. ಇದು ಗಂಭೀರ ಹಾಗೂ ಚರ್ಚೆಗೆ ಒಳಪಟ್ಟ ವಿಷಯ ಎಂದು ಪೀಠ ತಿಳಿಸಿದೆ.

ಈ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ನ್ಯಾಯಾಲಯದ ಮುಂದೆ ಮಧ್ಯಪ್ರವೇಶಕ್ಕೆ ಅನುಮತಿ ಕೇಳಿದರೂ, ಸುಪ್ರೀಂ ಕೋರ್ಟ್ ಪ್ರತ್ಯೇಕವಾಗಿ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದೆ.

ಸಾಮಾನ್ಯವಾಗಿ ಆರೋಪಿಗಳ ವಾದ ಕೇಳದೆ ಹೈಕೋರ್ಟ್ ಅಥವಾ ವಿಚಾರಣಾ ನ್ಯಾಯಾಲಯಗಳ ಜಾಮೀನು ಆದೇಶಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿಯುವುದಿಲ್ಲ. ಆದರೆ ಈ ಪ್ರಕರಣದಲ್ಲಿ ‘ವಿಶೇಷ ಸನ್ನಿವೇಶಗಳು’ ಇರುವುದರಿಂದ ತಡೆಯಾಜ್ಞೆ ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ. ಸೆಂಗಾರ್ ಈಗಾಗಲೇ ಐಪಿಸಿ ಸೆಕ್ಷನ್ 304 (ಭಾಗ–II) ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾರಣ, ಜಾಮೀನು ದೊರೆತರೂ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.́

- Advertisement -spot_img

More articles

- Advertisement -spot_img

Latest article