ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

Share post:

Subscribe

spot_imgspot_img

Popular

More like this
Related

ಆಡಳಿತ ಕಲಿಯಲು ಕುಮಾರಸ್ವಾಮಿ ಅವರಿಂದ ಪಾಠ ಬೇಕಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಆಡಳಿತ ಕಲಿಯಲು ಕುಮಾರಸ್ವಾಮಿ ಅವರಿಂದ ಪಾಠ ಬೇಕಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಂಗಳೂರು ಸೇರಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಉತ್ತರ ಒಳನಾಡಿನಲ್ಲಿ ಶೀತಗಾಳಿ ಸಕ್ರಿಯ

ಬೆಂಗಳೂರು ಸೇರಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಉತ್ತರ ಒಳನಾಡಿನಲ್ಲಿ ಶೀತಗಾಳಿ...

ಮೊದಲು ಗುರುಮಠಕಲ್ ಕ್ಷೇತ್ರದತ್ತ ನೋಡಿ; ಪ್ರಿಯಾಂಕ್ ಖರ್ಗೆ ಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಮೊದಲು ಗುರುಮಠಕಲ್ ಕ್ಷೇತ್ರದತ್ತ ನೋಡಿ; ಪ್ರಿಯಾಂಕ್ ಖರ್ಗೆ ಗೆ ಹೆಚ್.ಡಿ. ಕುಮಾರಸ್ವಾಮಿ...

ನರೇಗಾದಡಿ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗೆ ಸವಾಲು: ಸಂಸದ ಗೋವಿಂದ ಕಾರಜೋಳ

ನರೇಗಾದಡಿ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗೆ ಸವಾಲು: ಸಂಸದ ಗೋವಿಂದ ಕಾರಜೋಳ ಬೆಂಗಳೂರು: ನರೇಗಾ...