ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Date:

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಗಡಿ ಭಾಗದಲ್ಲಿರುವ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳ ಮೇಲೆ ಮಲೆಯಾಳ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಕೈ ಹಾಕಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಹಲವು ಕನ್ನಡಪರ ಸಂಘಟನೆಗಳೂ ಕೂಡ ಮಲೆಯಾಳ ಹೇರಿಕೆಯನ್ನು ಖಂಡಿಸಿವೆ ಎಂದು ಹೇಳಿದರು. ಕೇರಳದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವ ವಿಚಾರದಲ್ಲಿ ಕೇವಲ ಹೇಳಿಕೆ ನೀಡುವುದೋ ಅಥವಾ ಪತ್ರ ಬರೆಯುವುದೋ ಸಾಕಾಗುವುದಿಲ್ಲ. ಕರ್ನಾಟಕ ಸರ್ಕಾರ ಈ ವಿಷಯದಲ್ಲಿ ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ವಿಚಾರಗಳಲ್ಲಿ ಪದೇಪದೇ ಮೂಗು ತೂರಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. “ನಿಮ್ಮ ಕೆ.ಸಿ. ವೇಣುಗೋಪಾಲ್ ಅವರ ಕಿವಿ ಹಿಂಡಿ, ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕೇರಳದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಮಾಡುವುದು ಮತ್ತು ಮಲೆಯಾಳ ಹೇರಿಕೆಗೆ ಅವಕಾಶ ನೀಡದಿರುವ ಹೊಣೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮೇಲಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು: ದ್ವೇಷ ಭಾಷಣ...

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...