ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

Date:

ಖರ್ಗೆ ಭರವಸೆಗೆ ಜಾರಕಿಹೊಳಿ ಪ್ರತಿಧ್ವನಿ; ಸಂತಸ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‘ಬಹಳ ಸಂತೋಷ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾ ಪ್ರತಿಕ್ರಿಯೆ ನೀಡಿದರು.ಇನ್ನು ಸಿಎಂ ಅವರ ಲೇಖನ ಹಾಗೂ ಟ್ವಿಟರ್ ಪೋಸ್ಟ್ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದರು.
ಬಾಗಲಕೋಟೆ ಗಲಭೆ ಬಗ್ಗೆ ಕೇಳಿದಾಗ, “ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದು ಹೇಳಿದರು.
ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು, ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ” ಎಂದರು.ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ನಾನು ಒಂದು ರೂ. ಅನುದಾನ ಕೇಳಿಲ್ಲ ಎಂಬ ಶಾಸಕ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಮುಂದೆ ಮಾತನಾಡೋಣ” ಎಂದರು.

Share post:

Subscribe

spot_imgspot_img

Popular

More like this
Related

ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ!

ಗದಗ: 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಾಸಕ ಲೋಕಾಯುಕ್ತ ಬಲೆಗೆ! ಗದಗ:...

ಮಹಿಳಾ ಅಧಿಕಾರಿ ಮನೆಯಲ್ಲಿ ಕ್ಯಾಮೆರಾ ಪ್ರಕರಣ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

ಮಹಿಳಾ ಅಧಿಕಾರಿ ಮನೆಯಲ್ಲಿ ಕ್ಯಾಮೆರಾ ಪ್ರಕರಣ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ...

ಕಾಂಗ್ರೆಸ್ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ಸಿಗರ ರಕ್ತದಲ್ಲೇ...

ಪ್ರತಿದಿನ ಬೆಳಗ್ಗೆ ನೆನೆಸಿದ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.?

ಪ್ರತಿದಿನ ಬೆಳಗ್ಗೆ ನೆನೆಸಿದ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.? ಪ್ರತಿದಿನ...