ಬೆಂಗಳೂರು : ಬೆಂಗಳೂರಿನಲ್ಲಿ ಆಪ್ ಕಡೆಗೆ ಮುಖ ಮಾಡುತ್ತಿರುವ ನಾಯಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಬ್ಬರು ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿಗಳು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕರ್ನಾಟಕದಲ್ಲಿ ಎಎಪಿ ಸಿದ್ದಾಂತಗಳನ್ನು ಮೆಚ್ಚಿ ಅನೇಕರು ಪಕ್ಷ ಸೇರುತ್ತಿದ್ದಾರೆ. ಅದೇ ರೀತಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲಿಪ್ ಪಾಂಡೆ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಗೊಂಡರು. ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷವು ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುತ್ತಿದೆ. ದೆಹಲಿ ಮತ್ತು ಪಂಜಾಬ್ ನಂತರದಲ್ಲಿ ಇತರೆ ರಾಜ್ಯಗಳಲ್ಲೂ ತನ್ನ ಅಸ್ತಿತ್ವ ಬೆಳೆಸುವುದಕ್ಕೆ ಆಮ್ ಆದ್ಮಿ ಪಕ್ಷವು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.