ಆರೋಗ್ಯವಂತ ಮಗುವಿಗಾಗಿ ಸ್ವಂತ ಮಗುವನ್ನೇ ಕೊಂದ ದಂಪತಿ‌…!

Date:

ಮಂತ್ರವಾದಿಯ ಮಾತು ಕೇಳಿ, ಆರೋಗ್ಯವಂತ ಮಗು ಪಡೆಯಲು ತಮ್ಮ ಸ್ವಂತ ಮಗಳನ್ನೇ ದಂಪತಿ ಕೊಲೆ ಮಾಡಿ , ಮನೆಯಲ್ಲಿ ಹೂತಿಟ್ಟ ಘಟನೆ ಉತ್ತರ ಪ್ರದೇಶದ ಮೊರದಬಾದ್ ನಲ್ಲಿ ನಡೆದಿದೆ.
ಅಪೌಷ್ಟಿಕತೆ ಮತ್ತು ರಿಕೆಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ತಾರಾ (6) ಅಪ್ಪ-ಅಮ್ಮನಿಂದಲೇ ಕೊಲೆಯಾದ ದುರ್ದೈವಿ.
ಅನಾರೋಗ್ಯದಿಂದ ಬಳಸುತ್ತಿದ್ದ ತಾರಾಗೆ ಎಷ್ಟೇ ಚಿಕಿತ್ಸೆ ಕೊಡಿಸಿದರೂ ಆಕೆ ಗುಣಮುಖಳಾಗಿರಲಿಲ್ಲ.‌ ಇದರಿಂದ ಪೋಷಕರು ಮಂತ್ರವಾದಿಯೊಬ್ಬನ ಬಳಿ ಹೋಗಿದ್ದಾರೆ.

ಆ ಪಾಪಿ ‘ನಿಮ್ಮ ಮಗಳನ್ನು ಕೊಂದು ಮನೆಯಲ್ಲಿ ಹೂತು ಹಾಕಿದರೆ ಮುಂದೆ ಆರೋಗ್ಯವಂತ ಮಗು ಹುಟ್ಟುತ್ತದೆ ಎಂದು ಹೇಳಿದ್ದಾನೆ. ಅವನ ಮಾತಿನಂತೆ ಏನೂ ಅರಿಯದ ಕಂದಮ್ಮ ತಾರಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಹೂತುಹಾಕುವಾಗ ನೆರೆಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ‌ .‌
ಮರಣೋತ್ತರ ಪರೀಕ್ಷೆಯಿಂದ ತಾರಾ ಸಾಯುವಾಗ ಯಾವುದೇ ಆಹಾರ ಸೇವಿಸಿರಲಿಲ್ಲ.‌ ಒದ್ದಾಡಿ ಒದ್ದಾಡಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...