ಡೋರ್ ಮ್ಯಾಟ್ ಮಾರಾಟ ನಿಲ್ಲಿಸುವಂತೆ ಅಮೇಜಾನ್‍ಗೆ ಸುಷ್ಮಾ ವಾರ್ನಿಂಗ್..!

Date:

ಕೆನಡಾ ಮೂಲದ ಇ-ಕಾಮರ್ಸ್ ಸಂಸ್ಥೆಯಾದ ಅಮೆಜಾನ್ ಕಂಪನಿಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಡೋರ್ ಮ್ಯಾಟ್‍ಗಳನ್ನು ಮಾರಾಟ ಮಾಡ್ಬೇಡಿ ಅಂತ ಎಚ್ಚರಿಕೆ ನೀಡಿದ್ದಾರೆ. ಡೋರ್‍ಮ್ಯಾಟ್ ಮಾರಾಟ ಮಾಡಿದ್ದೆ ಆದ್ರೆ ನಿಮ್ಮ ಸಂಸ್ಥೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಅಂತ ವಾರ್ನಿಂಗ್ ನೀಡಿದ್ದಾರೆ..! ಅಷ್ಟಕ್ಕೂ ಡೋರ್ ಮ್ಯಾಟ್ ಮಾರಾಟಕ್ಕೂ ಸುಷ್ಮಾ ಅವರು ವಾರ್ನಿಂಗ್ ಕೊಡೋಕೂ ಏನಿದೆ ಸಂಬಂಧ ಅಂತ ನೀವು ಕೇಳೋದಾದ್ರೆ ಈ ಸ್ಟೋರಿನ ನೀವು ಓದ್ಲೆ ಬೇಕು. ವಿಶ್ವದ ನಂ.1 ಆನ್ಲೈಲ್ ಶಾಪಿಂಗ್ ಸಂಸ್ಥೆಯಾದ ಅಮೇಜಾನ್ ಘೋರ ಅಪರಾದವೊಂದು ಮಾಡಿದೆ. ದೇಶದ ರಾಷ್ಟ್ರಧ್ವಜವನ್ನು ಹೋಲುವ ಡೋರ್ ಮ್ಯಾಟ್‍ಗಳನ್ನು ಉತ್ಪಾದಿಸಿದಲ್ಲದೆ ಅದನ್ನು 1491ರೂ.ಗೆ ಮಾರಾಟಕ್ಕಿಟ್ಟಿದ್ದಾರೆ..! ಇದರ ಮಾಹಿತಿ ತಿಳಿಯುತ್ತಿದ್ದಂತೆ ಅಮೇಜಾನ್ ಸಂಸ್ಥೆಗೆ ಎಚ್ಚರಿಕೆ ನೀಡಿರುವ ಅವರು ಕೂಡಲೆ ಉತ್ಪನ್ನಗಳನ್ನು ವಾಪಾಸ್ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಕಾಲೊರೆಸುವ ಡೋರ್ ಮ್ಯಾಟ್‍ಗಳಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹೋಲುವ ಉತ್ಪನ್ನಗಳನ್ನು ಮಾರಾಟಕ್ಕಿಟ್ಟಿರೋದು ನಮ್ಮ ದೇಶದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತೆ ಎಂದು ಹೇಳಿರುವ ಅವರು ಅಮೇಜಾನ್ ಕಂಪನಿ ತಾವು ಮಾಡಿರೋ ತಪ್ಪಿಗೆ ಕೂಡಲೆ ಕ್ಷಮೆ ಯಾಚಿಸಬೇಕು. ಇಲ್ಲದಿದ್ರೆ ಈಗಾಗಲೆ ಕಂಪನಿ ಅಧಿಕಾರಿಗಳಿಗೆ ನೀಡಿರೋ ವೀಸಾವನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಇದಕ್ಕೆ ಮಣಿದಿರುವ ಅಮೇಜಾನ್ ರಾಷ್ಟ್ರಧ್ವಜ ಮಾದರಿಯ ಉತ್ಪನ್ನಗಳನ್ನು ಹಿಂಪಡೆದು ಮಾರಾಟ ಸ್ಥಗಿತಗೊಳಿಸಿದೆ.

 

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಖಂಡಿಸುವ ಪ್ರಥಮ್ ನುಡಿದ ಭವಿಷ್ಯ ನಿಜವಾಗುತ್ತಾ??

ಭಾರಿ ಗಿಫ್ಟ್ ನೀಡೋಕೆ ಮುಂದಾಗಿದೆ ಜಿಯೋ..!

ರಯೀಸ್ ಚಿತ್ರ ಬಿಡುಗಡೆ ಮಾಡ್ಬೇಡಿ: ಶಿವಸೇನೆ ಧಮ್ಕಿ..!

ಅಧಿಕಾರಿಗಳ ಕರಾಳ ಮುಖವನ್ನು ವಿಡಿಯೋ ಮೂಲಕ ಬಯಲಿಗೆಳೆದ ಯೋಧ..!

ಇನ್ಮುಂದೆ ಖಾಸಗೀ ಆಸ್ಪತ್ರೆಯಲ್ಲಿ ಫ್ರೀ ಟ್ರೀಟ್‍ಮೆಂಟ್ ಇರೋದಿಲ್ಲ..!

ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...