ಖಾಸಗಿ ವೈದ್ಯರು ಈ ಡ್ರೈವರನ್ನು ನೋಡಿ ಕಲಿಯಬೇಕು…! ಮಗುವನ್ನು ಉಳಿಸಲು ಆ್ಯಂಬುಲೆನ್ಸ್ ಡ್ರೈವರ್ ಮಾಡಿದ್ದೇನು..?!

Date:

ಕರ್ನಾಟಕದಲ್ಲಿ ಖಾಸಗಿ ವೈದ್ಯರ ಮುಷ್ಕರಿಂದ ಜನ ಸಾಯ್ತಿದ್ದಾರೆ..! ಖಾಸಗಿ ವೈದ್ಯರು ಹಾಗೂ ಸರ್ಕಾರದ ನಡುವಿನ ಹಗ್ಗಜಗ್ಗಾಟದಿಂದ ಜನ ನರಳುತ್ತಿದ್ದಾರೆ. ಅಮಾಯಕ ಜನರನ್ನು ಒತ್ತೆಯಾಳಂತೆ ಇಟ್ಕೊಂಡು ವೈದ್ಯರು ಸ್ವಲ್ಪವೂ ಮಾನವೀಯತೆ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಇಂಥವರಿಗೆ ನಾಚಿಕೆ ಆಗುವಂತೆ ಕೇರಳದ ಆ್ಯಂಬುಲೆನ್ಸ್ ಚಾಲಕರೊಬ್ಬರು ಮಗುವಿನ ಜೀವವನ್ನು ಉಳಿಸಿದ್ದಾರೆ..! ಖಾಸಗಿ ವೈದ್ಯರು ಈ ಡ್ರೈವರನ್ನು ನೋಡಿ ಕಲಿಯಬೇಕು..


ಹೌದು, ಕೇರಳದ ಲೈಬಾ ಎಂಬ 31ದಿನದ ಮಗುವನ್ನು ಪೆರಿಯಾಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ಉಳಿಯಬೇಕೆಂದರೆ ತರ್ತು ಹೃದಯ ಚಿಕಿತ್ಸೆ ಆಗಬೇಕೆಂದು ಅಲ್ಲಿನ ವೈದ್ಯರು ಸೂಚಿಸಿದ್ದರು. ಮಗುವನ್ನು ಕೂಡಲೇ ತಿರುವಂತಪುರಕ್ಕೆ ಕರೆದುಕೊಂಡು ಹೋಗುವುದು ಅನಿವಾರ್ಯವಾಗಿತ್ತು. ಮಗುವನ್ನು ತಿರುವನಂತಪುರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಹೊಣೆ ಹೊತ್ತಿದ್ದು ಕಾಸರಗೋಡು ಮೂಲದ ತಮೀಮ್ ಎಂಬ ಆ್ಯಂಬುಲೆನ್ಸ್ ಡ್ರೈವರ್. ರಾತ್ರೋರಾತ್ರಿ ಕೇವಲ 6 ಗಂmಯಲ್ಲಿ 508 ಕಿಮೀ ಕ್ರಮಿಸಿ ಮಗುವನ್ನು ತಿರುವನಂತಪುರದ ಶ್ರೀ ತಿರುನಲ್ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ಕರೆದೊಯ್ಯದರು.


ಮಗುವನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎಂಬ ವಿಚಾರವನ್ನು ತಮೀಮ್‍ಗೆ ಮೊದಲೇ ತಿಳಿಸಲಾಗಿತ್ತು. ಆಗಲ್ಲ ಅಂತ ಅವರು ಸುಮ್ಮನೇ ಕೂರಲಿಲ್ಲ. ಸವಾಲಾಗಿ ಸ್ವೀಕರಿಸಿ ಮಗುವಿನ ಜೀವ ಉಳಿಸಲು ತನ್ನ ಪ್ರಾಣ ಲೆಕ್ಕಿಸದೆ ಆ್ಯಂಬುಲೆನ್ಸ್ ಅನ್ನು ಚಾಲನೆ ಮಾಡಿದರು. ಕೋಝಿಕೋಡ್‍ನಲ್ಲಿ 20 ನಿಮಿಷ ನಿಲ್ಲಿಸಿದ್ದು ಬಿಟ್ಟರೆ ಬೇರೆಲ್ಲೂ ನಿಲ್ಲಿಸದೇ 508 ಕಿಮೀ ಕ್ರಮಿಸಿದ್ರು. ಒಟ್ಟು 6 ಗಂಟೆ45 ನಿಮಿಷದಲ್ಲಿ ಮಗುವನ್ನು ತಿರುವನಂತಪುರ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...