ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ಮಾಡಿದ್ದೇನು ?

0
46

ಬೆಂಗಳೂರು : ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಪ್ರಕರಣದಲ್ಲಿ ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ರೇಖಾ ಸೂಸೈಡ್​ಗೆ ಯತ್ನಿಸಿರುವ ಘಟನೆ ನಡೆದಿದೆ. ರೇಖಾ ಇಂದು ಮಧ್ಯಾಹ್ನ ಬ್ಯಾಡರಹಳ್ಳಿ ಠಾಣೆಗೆ ಬಂದಿದ್ದರು. ಸುಮಾ ವಿರುದ್ಧ ದೂರು ನೀಡಲು ರೇಖಾ ಮುಂದಾಗಿದ್ದರು, ಆದರೆ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಹೀಗಾಗಿ ನನ್ನ ಕಂಪ್ಲೇಂಟ್​ ಪೊಲೀಸರು ಸ್ವೀಕರಿಸಲಿಲ್ಲ ಎಂದು ಆಕ್ರೋಶ ಹೊರಹಾಕಿ ಠಾಣೆ ಮುಂದಿನ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಸಿಲುಕಲು ಯತ್ನ ನಡೆಸಿದ್ದಾರೆ. ಆರೋಪಿ ರೇಖಾ ಏಕಾಏಕಿ ರಸ್ತೆ ಮಧ್ಯಕ್ಕೆ ನುಗ್ಗಿದ್ದು, ಕೂಡಲೇ ರೇಖಾಳನ್ನು ಸಂಬಂಧಿಕರು ರಕ್ಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here