ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ ನಿವೇಶನಗಳನ್ನು ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು, ಪರಿಶೀಲಿಸಲು ಹೈ ಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ವಿಕರಿಸಿದೆ ಎಂದರು. ಬಿಡಿಎ ನಿಯಮಾವಳಿಗಳ ಅನುಸಾರವಾಗಿಯೇ ನನಗೆ ನಿವೇಶನ ಮಂಜೂರಾತಿಯಾಗಿದೆ. ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಿ ಕೆಟಗರಿ ಅಡಿಯಲ್ಲಿ ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು ಬಿಡಿಎ ನಿಗದಿ ಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ. ಈ ಹಿಂದೆ ನೂರಾರು ಮಂದಿ, ಬಿಡಿಎ ನಿಂದ ನಿವೇಶನ ಮಂಜೂರಾತಿ ಪಡೆದು ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನವನ್ನು ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ ಎಂದು ಮಾಹಿತಿ ನೀಡಿದರು.
Latest article
ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕನಿಗೆ ಐಟಿ ಶಾಕ್: 15 ಅಧಿಕಾರಿಗಳಿಂದ ದಾಳಿ
ಬೆಂಗಳೂರು: ಸಚಿವ ಜಮೀರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ...
ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ವಿಡಿಯೋ ದೌರ್ಜನ್ಯ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
ವಿಮಾನ ನಿಲ್ದಾಣದ ಇಮಿಗ್ರೇಷನ್...
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ !
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಭಂದಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ, ವಿಚಾರಣೆಗೆ 7 ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ....
order lipitor without prescription buy lipitor 40mg generic lipitor 10mg drug