ಮಲೆನಾಡ ಶಾಸಕರ ಸಭೆ ಕರೆದ ಗೃಹ ಸಚಿವರು !

0
43

ಬೆಂಗಳೂರು : ಪಶ್ಚಿಮಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಜುಲೈ 18ರಂದು ಗೃಹಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ‌ ಕರೆದಿದ್ದಾರೆ. ಪಶ್ಚಿಮಘಟ್ಟ ಕುರಿತಂತೆ ಪರಿಸರ ಸಚಿವಾಲಯ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆಯಲಾಗಿದೆ. ಕಳೆದ ವಾರ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ, ಕರ್ನಾಟಕ ಒಳಗೊಂಡಂತೆ ಒಟ್ಟು 56,826 ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 2 ತಿಂಗಳ ಗಡುವು ನೀಡಲಾಗಿತ್ತು. ಈ ಹಿಂದೆ ಕಸ್ತೂರಿರಂಗನ್ ಸಮಿತಿಯ ವರದಿಯನ್ನ ಸರ್ಕಾರ ತಿರಸ್ಕರಿಸಿತ್ತು. ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿರುವ ಕರ್ನಾಟಕ, ಜುಲೈ 18ರಂದು ನಡೆಯುವ ಸಭೆಯಲ್ಲಿ ಅಧಿಸೂಚನೆ ವಿರೋಧಿಸಿ ಶಾಸಕರು ಗೊತ್ತುವಳಿ ಮಂಡಿಸಲಿದ್ದಾರೆ.

LEAVE A REPLY

Please enter your comment!
Please enter your name here