ರಿಯಲ್ ಎಸ್ಟೇಟ್​ ಹೆಸರಿನಲ್ಲಿ ವಂಚಿಸಿದಕ್ಕೆ ನಿರ್ಮಾಪಕನ ಬಂಧನ

Date:

ಬೆಂಗಳೂರು : ಸಿನಿಮಾಗೆ ಬಂಡವಾಳ ಹಾಕಿ ಲಾಸ್ ಆದ ಬಳಿಕ ಅಡ್ಡದಾರಿ ಹಿಡಿದಿದ್ದ ಸ್ಯಾಂಡಲ್ ವುಡ್ ನಿರ್ಮಾಪಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಸೇರಿ ನಾಲ್ವರನ್ನ ರಾಜಾಜಿನಗರ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಜುನಾಥ, ಶಿವಕುಮಾರ, ಗೋಪಾಲ, ಚಂದ್ರಶೇಖರ ಬಂಧಿತ ಆರೋಪಿಗಳು. ರಿಯಲ್ ಎಸ್ಟೇಟ್​ ಹೆಸರಿನಲ್ಲಿ ವಂಚಿಸಿದಕ್ಕೆ ನಿರ್ಮಾಪಕನ ಬಂಧನ ಮಾಡಲಾಗಿದೆ. ಸಿನಿಮಾಗೆ ಕೋಟ್ಯಂತರ ರೂ. ಬಂಡವಾಳ ಹೂಡಿದ್ದ ಮಂಜುನಾಥ, ಸಿನಿಮಾ ನಿರೀಕ್ಷಿತ ಪ್ರದರ್ಶನ ಕಾಣದೆ ನಷ್ಟವಾಗಿತ್ತು. ರಾಜಾಜಿನಗರದಲ್ಲಿ ಈಗಲ್ ಟ್ರೀ ಬಿಲ್ಡರ್ಸ್ ಆಯಂಡ್​ ಡೆವಲಪರ್ಸ್​ ಡಾಟ್​ ಹೆಸರಿನಲ್ಲಿ ಮಂಜುನಾಥ ರಿಯಲ್ ಎಸ್ಟೇಟ್​ ಕಚೇರಿ ತೆರೆದಿದ್ದ. ಜಾಹೀರಾತು ನೀಡಿದ್ದ ಮಂಜುನಾಥನನ್ನು ಪುಷ್ಪಕುಮಾರ್​ ಎನ್ನುವವರು ಸಂಪರ್ಕಿಸಿದ್ದಾರೆ. ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಂಜುನಾಥ 2 ಲಕ್ಷ ಪಡೆದಿದ್ದ. ಯಾರದ್ದೋ ಸೈಟ್ ತೋರಿಸಿ ಕೊಡಿಸುವುದಾಗಿ ನಂಬಿಸಿದ್ದ. ದಾಖಲೆ ಕೇಳಿದಾಗ ಮಂಜುನಾಥನ ವಂಚನೆ ಜಾಲ ಬಯಲಾಗಿತ್ತು. ರಾಜಾಜಿನಗರ ಪೊಲೀಸ್​ ಠಾಣೆಗೆ ಪುಷ್ಪಕುಮಾರ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸ್ ಸಿಬ್ಬಂದಿ, ನಿರ್ಮಾಪಕ ಮಂಜುನಾಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...