ಆಯುಷ್ಮಾನ್ ಕಾರ್ಡ್ ಗೆ ಸರಳ ನಿಯಮಗಳ ಜಾರಿಗೆ ನಿರ್ಧಾರ

Date:

ಆಯುಷ್ಮಾನ್ ಕಾರ್ಡ್ ಬಳಸಲು ಶೀಘ್ರವೇ ಸರಳೀಕೃತ ನಿಯಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು. ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...