No menu items!
23.4 C
Munich
Saturday, May 2, 2026

ಸಾಲಮನ್ನಾದ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಬಿಎಸ್ ವೈ

Must read

ನಾನು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಷ್ಟ್ರೀಕೃತ ಬ್ಯಾಂಕ್ ಗಳ 1ಲಕ್ಷದವರೆಗಿನ‌ ಬೆಳೆ ಸಾಲ,‌ಸಹಕಾರ ಬ್ಯಾಂಕ್ ಗಳಲ್ಲಿನ 1 ಲಕ್ಷಗಳವರೆಗಿನ ಸಾಲ ಮತ್ತು ನೇಕಾರರ 1 ಲಕ್ಷದವರೆಗಿನ ಸಾಲ ಮನ್ನಾ ಮಾಉವ ಭರವಸೆ ನೀಡಿದ್ದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರಿಗೆ ಹೇಳಿದ್ದೇನೆ. ಅದರಂತೆ ಅವರು ಈ ಬಗ್ಗೆ ಅಂಕಿಅಂಶಗಖನ್ನು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ನೀಡಲಿದ್ದಾರೆ. ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಪ್ರಮಾಣ ವಚನ ಸ್ವೀಕರಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ರಾಜ್ಯದ ಆರೂವರೆ ಕೋಟಿ ಜನತೆಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮೂರನೇ ಬಾರಿಗೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನನ್ನನ್ನು ಮತ್ತು ನಮ್ಮ ಪಕ್ಷವನ್ನು ಬೆಂಬಲಿಸಿದ ರೈತರು, ಜನರಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ರೈತರು,‌ನೇಕಾರರ ಸಾಲಮನ್ನಾದ ಬಗ್ಗೆ ಹೇಳಿದ್ದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನಕೈಗೊಳ್ಳುವುದಾಗಿ ತಿಳಿಸಿದರು.
ಅದೇರೀತಿ ಬಹುಮತ ಸಾಬೀತುಪಡಿಸಲು 15 ದಿನ ಕಾಯುವುದಿಲ್ಲ. ಆದಷ್ಟು ಬೇಗ ಸಾಬೀತುಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article