ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಬಳಿಕ ನಾಡಗೀತೆ ಕಡ್ಡಾಯಗೊಳಿಸಲು ಕನ್ನಡಪರ ಸಂಘಟನೆಗಳು ಮನವಿ ಮಾಡಿವೆ. ಆರ್ ಟಿ ನಗರದ ಸಿಎಂ ಖಾಸಗಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ‘ಬನಾರಸ್’ ಬಹುಭಾಷಾ ಸಿನಿಮಾದ ನವ ನಾಯಕ ನಟ ಹಾಗೂ ಶಾಸಕ ಜಮೀರ್ ಅಹ್ಮದ್ ಅವರ ಪುತ್ರ ಜೈದ್ ಖಾನ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಇದೇ ಸಂದರ್ಭದಲ್ಲಿ ತಾವು ನಟಿಸಿದ ಮೊದಲ ಚಲನಚಿತ್ರ ‘ಬನಾರಸ್’ ಕನ್ನಡ ಸೇರಿ ಬಹುಭಾಷೆಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಆಗಿ ನ.4ರಂದು ಬಿಡುಗಡೆಯಾಗಲಿದ್ದು, ವೀಕ್ಷಿಸಲು ಆಗಮಿಸಬೇಕು ಎಂದು ಬೊಮ್ಮಾಯಿಗೆ ವಿನಂತಿಸಿದ್ದಾರೆ. ಸಿಎಂ ಬೊಮ್ಮಾಯಿ ಭೇಟಿ ನಂತರ ಜೈದ್ ಖಾನ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ರಾಷ್ಟ್ರಕವಿ ಕುವೆಂಪು ರಚಿಸಿದ ಗೀತೆಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ನಾಡಗೀತೆ ಎಂದು ಆದೇಶಿಸಿದ್ದು, ದೇಶಪ್ರೇಮದ ಜತೆಗೆ ನಾಡಿನ ಅಭಿಮಾನ ಹೆಚ್ಚಿಸಲು ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಬಳಿಕ ನಾಡಗೀತೆ ಹಾಡು ಕಡ್ಡಾಯಗೊಳಿಸಲು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದರು. ಬನಾರಸ್ ಸಿನಿಮಾವನ್ನು ಹಿಂದೂಪರ ಸಂಘಟನೆಗಳ ವಿರೋಧವೇಕೆ ಎನ್ನುವುದು ಗೊತ್ತಿಲ್ಲ. ನನ್ನ ತಂದೆಯವರ ಕಾರಣಕ್ಕೆ ವಿರೋಧಿಸುತ್ತಿದ್ದರೆ ನನಗೂ, ಅದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
Latest article
ಎಲೆಕ್ಷನ್ ಆದ ಬಳಿಕ ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನ !
ಬೆಂಗಳೂರು: ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಏಕನಾಥ ಶಿಂಧೆಗೆ ಟಾಂಗ್ ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ...
ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಸಾಧ್ಯ ಇಲ್ಲ, ಅದು ಅವರ ಭ್ರಮೆ !
ಬೆಂಗಳೂರು: ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೇ ನೀಡಿದ ಅವರು, ಅವರು ಭ್ರಮೆಯಲ್ಲಿ...
ಪಾಟ್ನಾ ಸಾಹಿಬ್ ಗುರುದ್ವಾರಾದಲ್ಲಿ ಸೇವೆ ಸಲ್ಲಿಸಿದ ಪ್ರಧಾನಿ ಮೋದಿ
ಪಾಟ್ನಾ: ಲೋಕಸಭೆ ಚುನಾವಣೆಗಾಗಿ ಬಿಹಾರದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುದ್ವಾರ ಪಾಟ್ನಾ ಸಾಹಿಬ್ಗೆ ಭೇಟಿ ನೀಡಿದರು. ಸಾಂಪ್ರದಾಯಿಕ ಕುರ್ತಾ, ಕೇಸರಿ ಸಿಖ್ ಪೇಟ ಧರಿಸಿ...