ನಿವೇಶನಗಳ ಹರಾಜಿಗೆ ಹೈಕೋರ್ಟ್ ತಡೆಯಾಜ್ಞೆ

Date:

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಮೂಲೆ ನಿವೇಶನಗಳ ಹರಾಜಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅರ್ಕಾವತಿ ಲೇಔಟ್ ಏಳನೆ ಬ್ಲಾಕ್‍ನಲ್ಲಿ ಬಿಡಿಎ ನಿವೇಶನ ಹೊಂದಿದ್ದ ಮಂಜುನಾಥ ರಾವ್, ಮಂಜುಳಾ ಆರ್.ಶೆಟ್ಟಿ ಮತ್ತು ಇಂದುಮತಿ ಬಾಬು ಶೇಖರ್ ಅವರು ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪರವಾಗಿ ಮಾರಾಟ ಪತ್ರಗಳನ್ನು ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿದೆ. ಬಿಡಿಎ ಮಾಡಿದ ತಪ್ಪಿನಿಂದಾಗಿ ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಿಂದ ವಂಚಿತರಾದವರು ಪರ್ಯಾಯ ನಿವೇಶನಗಳಿಗಾಗಿ ಕಾಯುತ್ತಿರುವಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಖಾಸಗಿ ರಿಯಲ್ ಎಸ್ಟೇಟ್ ಕಂಪೆನಿಯಂತೆ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಂಚಿಕೆದಾರರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಬಾಕಿ ಉಳಿದಿರುವಾಗ ಮತ್ತು ಆ ಹಂಚಿಕೆದಾರರು ಕಚೇರಿಯಿಂದ ಕಚೇರಿಗೆ ದಿನವೂ ಎಡತಾಕುತ್ತಿದ್ದಾರೆ ಮತ್ತು ವಿವಿಧ ಪರಿಹಾರಗಳನ್ನು ಕೋರಿ ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. ಹೀಗಾಗಿ, ಮೊದಲು ನಿವೇಶನ ಹಂಚಿಕೆದಾರರಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುವವರೆಗೆ ಮೂಲೆ ನಿವೇಶನಗಳನ್ನು ಹರಾಜು ಮಾಡಬಾರದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...