ನಿವೇಶನಗಳ ಹರಾಜಿಗೆ ಹೈಕೋರ್ಟ್ ತಡೆಯಾಜ್ಞೆ

Date:

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಡಿಎ ಅಭಿವೃದ್ಧಿಪಡಿಸುತ್ತಿರುವ ಮೂಲೆ ನಿವೇಶನಗಳ ಹರಾಜಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅರ್ಕಾವತಿ ಲೇಔಟ್ ಏಳನೆ ಬ್ಲಾಕ್‍ನಲ್ಲಿ ಬಿಡಿಎ ನಿವೇಶನ ಹೊಂದಿದ್ದ ಮಂಜುನಾಥ ರಾವ್, ಮಂಜುಳಾ ಆರ್.ಶೆಟ್ಟಿ ಮತ್ತು ಇಂದುಮತಿ ಬಾಬು ಶೇಖರ್ ಅವರು ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪರವಾಗಿ ಮಾರಾಟ ಪತ್ರಗಳನ್ನು ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿದೆ. ಬಿಡಿಎ ಮಾಡಿದ ತಪ್ಪಿನಿಂದಾಗಿ ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಿಂದ ವಂಚಿತರಾದವರು ಪರ್ಯಾಯ ನಿವೇಶನಗಳಿಗಾಗಿ ಕಾಯುತ್ತಿರುವಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಖಾಸಗಿ ರಿಯಲ್ ಎಸ್ಟೇಟ್ ಕಂಪೆನಿಯಂತೆ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹಂಚಿಕೆದಾರರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಬಾಕಿ ಉಳಿದಿರುವಾಗ ಮತ್ತು ಆ ಹಂಚಿಕೆದಾರರು ಕಚೇರಿಯಿಂದ ಕಚೇರಿಗೆ ದಿನವೂ ಎಡತಾಕುತ್ತಿದ್ದಾರೆ ಮತ್ತು ವಿವಿಧ ಪರಿಹಾರಗಳನ್ನು ಕೋರಿ ಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. ಹೀಗಾಗಿ, ಮೊದಲು ನಿವೇಶನ ಹಂಚಿಕೆದಾರರಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುವವರೆಗೆ ಮೂಲೆ ನಿವೇಶನಗಳನ್ನು ಹರಾಜು ಮಾಡಬಾರದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...