ಪತಿಯನ್ನು‌ ಕೊಂದು ಆ್ಯಕ್ಸಿಡೆಂಟ್ ಅಂತ ಬಿಂಬಿಸಿದ್ಲು…!

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಹೊರವಲಯದಲ್ಲಿ ಜೂ‌ 1 ರಂದು ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅದು ಅಪಘಾತ ಎನ್ನಲಾಗಿತ್ತು. ಆದರೆ , ಅಸಲಿಗೆ ಅದು ಅಪಘಾತವಲ್ಲ ಕೊಲೆ…!
ಇದು ಅಪಘಾತವಲ್ಲ ಕೊಲೆ ಎಂಬುದು ಗ್ರಾಮಸ್ಥರ ಶಂಕೆಯಾಗಿತ್ತು. ಅದರ ಬೆನ್ನತ್ತಿದೆ ಪೊಲೀಸರಿಗೆ ಗ್ರಾಮಸ್ಥರ ಶಂಕೆ ಸತ್ಯ ಎಂಬುದು ತಿಳಿಯಿತು.
ನಿವೃತ್ತ ಸೈನಿಕ ಪ್ರಕಾಶ್ ಶಂಕರ್ ಈಟಿ ಅವರು ಮೃತರು. ಇವರ ಸಾವಿಗೆ ನ್ಯಾಯ ಕೊಡಿಸುವಂತೆ ಪತ್ನಿ ಶ್ರೀದೇವಿ ಈಟಿ ಚಿಕ್ಕೋಡಿ ಸಂಚಾರಿ ಠಾಣೆಗೆ ದೂರು ಸಹ ನೀಡಿದ್ದಳು.


ಪ್ರಕರಣ ಬೇಧಿಸಿದಾಗ ಈ ಶ್ರೀದೇವಿಯೇ ತನ್ನ ಪತಿ ಪ್ರಕಾಶ್ ‌ನನ್ನು ಕೊಲೆಗೈದಿದ್ದು ಎಂದು ತಿಳೀತು.
ಈಕೆ ಸಂತೋಷ್ ಎಂಬುವವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಪ್ರಕಾಶನ ಕೊಲೆಗೆ ತಾನೇ ಸುಫಾರಿ ಕೊಟ್ಟು ಆಕ್ಸಿಡೆಂಟ್ ನಾಟಕವಾಡಿದ್ದಳು.
ಇದೀಗ ಎಲ್ಲವೂ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀದೇವಿ, ಸಂತೋಷ್, ಮಹೇಶ್ , ಬರಮು ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...