ಯೋಧ ಗುರುವಿನ ಮನೆಗೆ ಭೇಟಿ ನೀಡಿ ಕಣ್ಣೀರಿಟ್ಟ ನಟಿ ಹರಿಪ್ರಿಯ

Date:

ಹುತಾತ್ಮ ಗುರು ಅವರ ಮನೆಗೆ ಇಂದುಬೆಲ್ ಬಾಟಮ್ಚಿತ್ರ ತಂಡ ಸಹಾಯ ಧನ ನೀಡಿ ಅವರ ತಾಯಿ, ಪತ್ನಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಗುರು ಮನೆಯವರ ದುಃಖ ನೋಡಿ, ತಂದೆಯ ಸಾವನ್ನು ನೆನೆಪಿಸಿಕೊಂಡು ನಟಿ ಹರಿಪ್ರಿಯಾ ಕಣ್ಣೀರು ಹಾಕಿದ್ದಾರೆ.

ಕುಟುಂಬದಲ್ಲಿ ಯಾರನ್ನೇ ಕಳೆದುಕೊಂಡರು ಎಷ್ಟು ನೋವಾಗುತ್ತದೆ ಎಂಬುದು ನನಗೆ ತಿಳಿದಿದೆ. ಯಾಕೆಂದರೆ ಆ ನೋವು ನಮ್ಮ ತಂದೆಯನ್ನು ಕಳೆದುಕೊಂಡಾಗ ನನಗೂ ಆಗಿದೆ. ಆದರೆ ಯೋಧ ಗುರು ಅವರ ಪತ್ನಿ, ತಾಯಿ ನೋಡಿದರೆ ನನಗೆ ತುಂಬಾ ಸಂಕಟವಾಗುತ್ತಿದೆ. ಹೀನ ಕೃತ್ಯ ಎಸಗಿರುವ ಉಗ್ರರಿಗೆ ಆದಷ್ಟು ಬೇಗ ಉತ್ತರ ಕೊಟ್ರೆ ದೇಶದ ಜನ ಖುಷಿ ಆಗುತ್ತಾರೆ ಎಂದರು.ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯ ಗುಡಿಗೆರೆ ವೀರಯೋಧ ಗುರು ಸಮಾಧಿಗೂ ಬೆಲ್ಬಾಟಂ ಚಿತ್ರ ತಂಡ ಭೇಟಿ ನೀಡಿ ಗೌರವ ವಂದನೆ ಸಲ್ಲಿಸಿತು. ಬಳಿಕ ನಿರ್ಮಾಪಕ ಸಂತೋಷ್ ಕುಮಾರ್ 25 ಸಾವಿರ ರೂ. ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು 50 ಸಾವಿರ ರೂ. ಚೆಕ್ ವಿತರಿಸಿದ್ರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...