ಬೆಂಗಳೂರಿನಲ್ಲಿ ಅಲ್ ಖೈದಾ ಶಂಕಿತ ಉಗ್ರನ ಬಂಧನ..! ವಿವಾದಾತ್ಮಕ ಹೇಳಿಕೆ ನೀಡುವುದೇ ಈತನ ಕೆಲಸವಾಗಿತ್ತು..!

0
79

ಅಲ್ ಖೈದಾ ಭಯೋತ್ಪಾದಕ ಸಂಘಟನೆಗೆ ಸಹಕಾರ ನೀಡಿದ ಆರೋಪದ ಮೇಲೆ ಮೌಲ್ವಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸರು ಗುರುವಾರ ತಡರಾತ್ರಿ ಮೌಲ್ವಿಯನ್ನು ಬಂಧಿಸಿದ್ದು, ಜನವರಿ 20ರ ತನಕ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಬಂಧಿತನನ್ನು ಮೌಲಾನಾ ಅನ್ಸರ್ ಶಾ ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್ನಲ್ಲಿರುವ ಮದರಸಾದಲ್ಲಿ ಮೌಲ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅನ್ಸರ್, ಇಲಿಯಾಸ್ ನಗರದಲ್ಲಿ ವಾಸವಾಗಿದ್ದ. ಗುರುವಾರ ರಾತ್ರಿ ದೆಹಲಿ ಪೊಲೀಸರು ಅನ್ಸರ್ನನ್ನು ಬಂಧಿಸಿದ್ದಾರೆ. ತನಿಖೆ ಶುಕ್ರವಾರ ಪಟಿಯಾಲಾ ಕೋರ್ಟ್ ಗೆ ಅನ್ಸರ್ನನ್ನು ಹಾಜರುಪಡಿಸಿದ್ದು, ಜನವರಿ 20ರ ತನಕ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಅನ್ಸರ್ ಜೊತೆ ಆಟೋ ಚಾಲಕ ಜಬ್ಬಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ಅಲ್ ಖೈದಾ ಪರವಾಗಿ ಪ್ರಚಾರ ಮಾಡುತ್ತಿದ್ದ ಮೌಲ್ವಿಯನ್ನು ಕಟಕ್ನಲ್ಲಿ ದೆಹಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿಯೂ ಮೌಲ್ವಿಯೊಬ್ಬನನ್ನು ಬಂಧಿಸಲಾಗಿತ್ತು. ಇವರ ವಿಚಾರಣೆ ಬಳಿಕ ಬೆಂಗಳೂರಿನಲ್ಲಿ ಮೌಲ್ವಿಯನ್ನು ಬಂಧಿಸಲಾಗಿದೆ.
ಯುವಕರಿಗೆ ಅಲ್ ಖೈದಾ ಸೇರುವಂತೆ ಅನ್ಸರ್ ಪ್ರಚೋದನೆ ನೀಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅನ್ಸರ್ ಮೊದಲು ಬನಶಂಕರಿಯ ಮಸೀದಿಯಲ್ಲಿ ಪ್ರವಚನ ನಡೆಸುತ್ತಿದ್ದ. ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಅನ್ಸರ್ ನನ್ನು ಎರಡು ಭಾರಿ ಕೆಲಸದಿಂದ ಕಿತ್ತೊಗೆಯಲಾಗಿತ್ತು. ಆದ್ದರಿಂದ ತಿಂಗಳ ಹಿಂದಷ್ಟೆ ಇಲಿಯಾಸ್ ನಗರಕ್ಕೆ ವಾಸ್ತವ್ಯ ಬದಲಿಸಿದ್ದ. ಗುರುವಾರ ರಾತ್ರಿ 9.30ರ ಸುಮಾರಿಗೆ ಅನ್ಸರ್ ಆಸೀಫ್ ಎಂಬುವವರ ಮನೆಯಲ್ಲಿ ಊಟ ಮಾಡುತ್ತಿದ್ದಾಗ, ಆಗಮಿಸಿದಾಗ ಅಧಿಕಾರಿಗಳು ಅನ್ಸರ್ ವಶಕ್ಕೆ ಪಡೆದಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ, ನಂತರ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.
ದರೂಲ್ ಉಲೂಮ್ ಮತ್ತು ದೇವಬಂಧು ಸಿದ್ಧಾಂತಗಳನ್ನು ಹೆಚ್ಚಾಗಿ ಅಧ್ಯಯನ ಮಾಡಿದ್ದ ಅನ್ಸರ್ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ನಿಸ್ಸೀಮನಾಗಿದ್ದ. ತನ್ನ ಪ್ರಚೋದನಕಾರಿ ಭಾಷಣಗಳ ಮೂಲಕ ಯುವಕರನ್ನು ಉಗ್ರ ಸಂಘಟನೆಗಳತ್ತ ಸೆಳೆಯುತ್ತಿದ್ದ. ಬಳಿಕ ಅವರಿಗೆ ತರಬೇತಿ ನೀಡಿ ಆತ್ಮಹತ್ಯಾ ದಳದ ಸದಸ್ಯರನ್ನಾಗಿ ರೂಪಿಸಲು ನೆರವಾಗುತ್ತಿದ್ದ ಎನ್ನಲಾಗಿದೆ.
ಜಫರ್ ಮಸೂದ್ ಮತ್ತು ಅಬ್ದುಲ್ ರೆಹಮಾನ್ ಎಂಬ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದ ಅಧಿಕಾರಿಗಳು ಅವರ ಹೇಳಿಕೆಗಳ ಸಹಾಯದಿಂದ ಅನ್ಸರ್ ನನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಈಗ ಅನ್ಸರ್ ನನ್ನು ದೆಹಲಿಗೆ ಕರೆದೊಯ್ಯಲಾಗಿದ್ದು, ಇನ್ನಷ್ಟು ಸ್ಫೋಟಕ ಅಂಶಗಳು ಹೊರಬೀಳುವ ಸಾಧ್ಯತೆಗಳಿವೆ

  • ರಾಜಶೇಖರ ಜೆ.

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : [email protected]

ನೋಡ್ರಪ್ಪೋ ನೋಡ್ರೀ ಇದು ದುಡ್ಡಿನ ಮರ..! ಈ ಮರದಲ್ಲಿವೆ ಅಸಂಖ್ಯಾತ ಚಿಲ್ಲರೆ ಹಣ..!

ಕನ್ನಡ ಸಿನಿಮಾಗಳಿಗೇಕೆ ಥಿಯೇಟರ್ ಗಳಸಮಸ್ಯೆ..?! -ಕಿರಿಕ್ ಕೀರ್ತಿ

`ಹಾವು ಕಚ್ಚಿತಲ್ಲೋ ತಮ್ಮಾ ಹೋಗುತೈತೆ ಜೀವಾ..’ Kannada Folk Song

ಗನ್ ಕಲ್ಚರ್ ಎಫೆಕ್ಟ್, ದೊಡ್ಡಣ್ಣನ್ ಕಣ್ಣಲ್ಲಿ ಕಣ್ಣೀರು..!

ಪ್ರೀತಿ ಎಂಥವರನ್ನೂ ಬದಲಾಯಿಸುತ್ತೆ..! ಯಾರಿಂದಲೂ ಬದಲಾಗದ ಹುಡುಗರು ಹುಡುಗಿಯಿಂದ ಬದಲಾಗ್ತಾರೆ..!

ಒಂಟಿಕಾಲಲ್ಲೇ `ಮೌಂಟ್ ಎವರೆಸ್ಟ್’ ಏರಿದ ಸಾಹಸಿ..!

ಒಂದೇ ಇನ್ನಿಂಗ್ಸ್ ನಲ್ಲಿ 1009 ರನ್ ಬಾರಿಸದ ಪೋರ..! ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆಟೋ ಚಾಲಕನ ಮಗ..!

ಕನ್ನಡದವರು ಅಂದ್ರೆ ಏನಂದುಕೊಂಡಿದ್ದಾರೆ..? ಅಷ್ಟಕ್ಕೂ ಪರಿಸ್ಥಿತಿ ಯಾಕೆ ಹೀಗಾಗಿದೆ ಗೊತ್ತಾ..? ಈ ವೀಡಿಯೋ ನೋಡಿ..!

6ನೇ ಕ್ಲಾಸ್ ಫೇಲ್ ಆದವಳು ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಟಾಪ್ 2 ರ್ಯಾಂಕ್ ಪಡೆದಳು..!

ಕಳ್ಳನಿಂದ ಅಮ್ಮನನ್ನು ಕಾಪಾಡಿದ 13ರ ಪೋರ..! ಕೆಚ್ಚೆದೆಯ ಬಾಲಕನಿಗೆ ನ್ಯಾಷನಲ್ ಬ್ರೇವರಿ ಅವಾ

LEAVE A REPLY

Please enter your comment!
Please enter your name here