ಕಾವೇರಿ ವಿವಾದದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಉಂಟಾಗಿದ್ದ ಆತಂಕದ ವಾತಾವರಣ ತಣ್ಣಗಾಗಿದೆ. ಇಂದು ಪ್ರಕ್ಷುಬ್ಧ ಪರಿಸ್ಥಿತಿಯಿಂದ ಸ್ವಲ್ಪ ಮಟ್ಟಿನ ಸಹಜ ಸ್ಥಿತಿಗೆ ಸಾಗಿದೆ. ಇನ್ನು ಸೋಮವಾರ ಗಲಭೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಕೆಳಗುರುಳಿದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾನೆ.
ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದ ಕೆಲವೇ ಕ್ಷಣಗಳಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಪರಿಣಾಮ ಸೋಮವಾರವಿಡೀ ಬೆಂಗಳೂರು ಹೊತ್ತಿ ಉರಿದಿತ್ತು. ನಗರದೆಲ್ಲೆಡೆ ನಿಷೇದಾಜ್ಞೆ ಜೊತೆಗೆ, ಗಲಭೆ ಪೀಡಿತ ಪ್ರದೇಶಗಳಲ್ಲಿ ಕಪ್ರ್ಯೂ ಜಾರಿಗೊಳಿಸಿದ್ದರಿಂದ ಪರಿಸ್ಥಿತಿ ಇದೀಗ ನಿಯಂತ್ರಣಕ್ಕೆ ಬಂದಿದೆ. ಸಾರಿಗೆ ಬಸ್ ಸಂಚಾರ ಮಂಗಳವಾರ ಸಂಜೆಯಿಂದಲೇ ಆರಂಭವಾಗಿದೆ.
ಇನ್ನು ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಟ್ ನೀರನ್ನು ಸೆ.20ರ ವರೆಗೂ ಹರಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಆದೇಶವನ್ನು ಖಡ್ಡಾಯವಾಗಿ ಪಾಲಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು. ತಕ್ಷಣವೇ ಉಭಯ ರಾಜ್ಯಗಳಲ್ಲಿ ನಡಿಯುತ್ತಿರುವ ಗಲಭೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.
POPULAR STORIES :
ಬಿಎಸ್ಎನ್ಎಲ್ ಜೊತೆ ಜಿಯೋ ಒಪ್ಪಂದ…!
ಪ್ಯಾರಾಲಿಂಪಿಕ್ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…