ಪೊಲೀಸ್ರ ಖೆಡ್ಡಾಕ್ಕೆ ಬಿದ್ದ ಬೆತ್ತನಗೆರೆ ಶಂಕರ

Date:

ಉದ್ಯಮಿಗಳ ಕಾರನ್ನ ಅಡ್ಡಗಟ್ಟಿ ದರೋಡೆ ಮಾಡೋಕೆ ರೆಡಿಯಾಗಿ ಕುಂತಿದ್ದ ಬೆತ್ತನಗೆರೆಯ ನರಹಂತಕ ಬೆತ್ತನಗೆರೆ ಶಂಕರ ಹಾಗೂ ಆತನ ಟೀಂ ಇದೀಗ ಬೆಂಗಳೂರು ಸಿಸಿಬಿ ಪೊಲೀಸ್ರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಬೆತ್ತನಗೆರೆ ಶಂಕರ, ಬಂಡೆ ಮಂಜ, ನಾರಾಯಣಸ್ವಾಮಿ, ಶ್ರೀಧರ ಹಾಗೂ ಶ್ರೀಕಾಂತ ಬಂಧಿತರು. ಬಂಧಿತರು ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಶ್ರೀಗಂಧನಗರದಿಂದ ಪಿಳ್ಳಪ್ಪನಕಟ್ಟೆಗೆ ಹೋಗುವ ಉದ್ಯಮಿಗಳ ಕಾರನ್ನ ಅಡ್ಡಗಟ್ಟಿ ಮರದ ದೊಣ್ಣೆಯನ್ನ ಹಿಡಿದು ಬೆದರಿಸೋದಕ್ಕೆ ಮುಂದಾಗಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ರೌಡಿಸ್ಕ್ವಾರ್ಡ್ ನ ತಂಡ ಆರೋಪಿಗಳನ್ನ ಬಂಧಿಸಿ ರಾಜಗೋಪಾಲನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಬೆತ್ತನಗೆರೆ ಶಂಕರನ ಮೇಲೆ ಕೊಲೆ-ಕೊಲೆಯತ್ನ ,ಸುಲಿಗೆ , ದರೋಡೆ ಪ್ರಕರಣ ಸೇರಿ ಸರಿಸುಮಾರು 40 ಪ್ರಕರಣದಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಜೈಲಿನಿಂದ ರಿಲೀಸ್ ಆಗಿ ರೌಡಿಸಂನಿಂದ ತೆರೆಮರೆಸರಿದಿದ್ದ ಶಂಕರ ಇದೀಗ ಮತ್ತೆ ಬಾಲ ಬಿಚ್ಚೋದಕ್ಕೆ ರೆಡಿಯಾಗಿದ್ದ. ಅದಕ್ಕೆ ಸಿಸಿಬಿ ಪೊಲೀಸ್ರು ಸರಿಯಾಗೇ ಬ್ರೇಕ್ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...