No menu items!
9.7 C
Munich
Friday, May 15, 2026

ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ

Must read

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸುವಂತೆ ಆಪ್ ಮುಖಂಡ ಭಾಸ್ಕರ್ ರಾವ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆಯನ್ನು ಅನುಮೋದಿಸಿರುವ ಅವರು, ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಅಭಿಪ್ರಾಯ 100% ಸತ್ಯ ಎಂದಿದ್ದಾರೆ.

 

 

ಈ ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ. ಆದ್ದರಿಂದ ಎಸಿಬಿಯನ್ನು ಮುಚ್ಚಬೇಕು ಮತ್ತು ಬಲವಾದ ಸ್ವತಂತ್ರ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ಭಾಸ್ಕರ್ ರಾವ್ ಸಲಹೆ ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article