Big 3 ಖ್ಯಾತಿಯ ಶೆಟ್ರ ಹಿರಿಮೆಗೆ ಮತ್ತೊಂದು ಗರಿ!

1
23

ಜಯಪ್ರಕಾಶ್ ಶೆಟ್ಟಿ …ಕನ್ನಡ ಪತ್ರಿಕೋದ್ಯಮದ ಹೆಸರಾಂತ ಹೆಸರು.‌ ಕಂಚಿನ ಕಂಠದ ನಿರೂಪಕ..ಸದ್ಯ ಸುವರ್ಣ – 24*7 ಸುದ್ದಿವಾಹಿನಿಯಲ್ಲಿ ಪ್ರಸಕ್ತ ವಿದ್ಯಮಾನಗಳ ವಿಭಾಗದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಕೆಚ್ಚಿದೆಯ ಪತ್ರಕರ್ತ.‌ಕರ್ನಾಟಕದ ಮನೆ-‌ಮನೆಗಳಿಗೂ ಪರಿಚಿತರಾಗಿರು ಜಯಪ್ರಕಾಶ್ ಶೆಟ್ಟಿಯವರು…ಜೆಪಿ ಎಂದೇ ಖ್ಯಾತರು.

ಬಿಗ್ 3 ಎಂಬ ಕಾರ್ಯಕ್ರಮದ ‌ಮೂಲಕ ಜನಪರ ಧ್ವನಿಯಾಗಿ , ಭ್ರಷ್ಟರಿಗೆ ನಡುಕ ಹುಟ್ಟಿಸುವ ಶೆಟ್ರು ಸ್ಕ್ರೀನ್ ನಲ್ಲಿದ್ದಾರೆ ಎಂದರೆ ಟಿವಿ ರಿಮೋರ್ಟ್ ಗೆ ಕೆಲಸ ಇರಲ್ಲ! ಅಷ್ಟೊಂದು ಇಷ್ಟಪಟ್ಟು ಜನ ಜೆಪಿ ಅವರ ವಾರ್ತಾವಾಚನ, ಕಾರ್ಯಕ್ರಮಗಳನ್ನು ನೋಡುತ್ತಾರೆ.
ಕನ್ನಡ ದೃಶ್ಯ ಮಾಧ್ಯಮ ಲೋಕದ ಈ ದಿಗ್ಗಜ ಪತ್ರಕರ್ತರ ಹಿರಿಮೆಗೆ ಮತ್ತೊಂದು ಗರಿ ಅಲಂಕರಿಸಿದೆ.

ಹೌದು, ಸ್ಟಾರ್ ‌ಪತ್ರಕರ್ತ ಬಿಗ್ 3 ಖ್ಯಾತಿಯ ಜಯಪ್ರಕಾಶ್ ಶೆಟ್ಟಿ ಉಪ್ಪಾಳ ಅವರ ಹಿರಿಮೆಗೆ ಮತ್ತೊಂದು ಗರಿ ಸೇರಿದೆ. ಸುವರ್ಣ ನ್ಯೂಸ್ ನಲ್ಲಿ ಶೆಟ್ರು ನಡೆಸಿಕೊಡುವ ಜನಪ್ರಿಯ, ಜನಪರ ಕಾರ್ಯಕ್ರಮ ಬಿಗ್ 3 ಗೆ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಎನ್ಬಾ ಪ್ರಶಸ್ತಿ ಲಭಿಸಿದೆ. ಬಿಗ್ 3 ಕಾರ್ಯಕ್ರಮ ನಿರೂಪಣಾ ಶೈಲಿಗೂ ಜಯಪ್ರಕಾಶ್ ಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ.

1 COMMENT

LEAVE A REPLY

Please enter your comment!
Please enter your name here