ಕ್ಷಣಾರ್ಧದಲ್ಲಿ ಬೈಕ್ ಎಗರಿಸುತ್ತಿದ್ದ ಕಳ್ಳನ ಬಂಧನ

Date:

ಕ್ಷಣಾರ್ಧದಲ್ಲಿ ಬೈಕ್ಗಳ ಎಗರಿಸ್ತಿದ್ದ ಚಾಲಾಕಿ ಕಳ್ಳನನ್ನ ಬಂಧಿಸಲಾಗಿದೆ . ಅಭಿಷೇಕ್ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ . ಶೋಕಿಗಾಗಿ ಅಡ್ಡದಾರಿ ಹಿಡಿದಿದ್ದ ಈ ಮಹಾನ್ ಖತರ್ನಾಕ್ ಕಳ್ಳನನ್ನ , ಮದ್ದೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ .

ಇನ್ನೂ ಈತನಿಂದ 30 ಬೈಕ್ಗಳನ್ನ ವಶಕ್ಕೆ ಪಡೆಯಲಾಗಿದೆ. ಎತ್ತಿನಗಾಡಿ ರೇಸ್ ಶೋಕಿ ಮಾಡಲು 30 ಬೈಕ್ಗಳನ್ನ ಕಳ್ಳತನ ಮಾಡಿದ್ದ  . ವೀಕೆಂಡ್ನಲ್ಲಿ ಎಂಟ್ರಿ ಕೊಡುತ್ತಿದ್ದ ಈ ಕಳ್ಳ , ಬೀದಿ ಬದಿಗಳಲ್ಲಿ ನಿಲ್ಲಿಸ್ತಿದ್ದ ಹೀರೋ-ಹೋಂಡಾ ಬೈಕ್ಗಳ ಕಳುವು ಮಾಡುತ್ತಿದ್ದ . ಮಂಡ್ಯದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣ ದಾಖಲಾಗಿತ್ತು . ಬೈಕ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು .ಮದ್ದೂರಿನ ಇನ್ಸ್ಪೆಕ್ಟರ್ ಸಂತೋಷ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು . ಪೊಲೀಸರ ಕಾರ್ಯಾಚರಣೆ ವೇಳೆ ಖದೀಮರು ಸಿಕ್ಕಿಬಿದ್ದಿದ್ದಾರೆ . ಸುಮಾರು 11 ಲಕ್ಷದ 10 ಸಾವಿರ ರೂ. ಮೌಲ್ಯದ 30 ಬೈಕ್ಗಳು ವಶಕ್ಕೆ ಪಡೆಯಲಾಗಿದೆ .

ಆರೋಪಿಗಳನ್ನ ಬಂಧಿಸಿ ಪೋಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ . ಹಾಗೂ ಮದ್ದೂರು ಪೊಲೀಸರ ಕಾರ್ಯಾಚರಣೆಗೆ SP ಎನ್.ಯತೀಶ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ .

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...