ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Date:

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಫೆಬ್ರವರಿ 10ರಂದು ವಜಾಗೊಳಿಸಿದೆ. ಇದರಿಂದ ಶಾಸಕರ ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್ ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಯಲ್ಲಿದೆ. ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರೊಂದಿಗೆ ಸಂಪರ್ಕ ಸಾಧಿಸಿ, ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕ ಬಸವರಾಜ್ಗೆ ನೇರ ಸಂಪರ್ಕವಿತ್ತು ಎನ್ನಲಾಗಿದೆ. ಹತ್ಯೆಗೆ ಮೊದಲು ಹಲವು ಬಾರಿ ಇಬ್ಬರೂ ಭೇಟಿಯಾಗಿದ್ದರೆಂಬ ಮಾಹಿತಿ ಸಿಐಡಿ ಬಳಿ ಲಭ್ಯವಿದ್ದು, ಪ್ರಮುಖ ಸಾಕ್ಷ್ಯಾಧಾರಗಳ ಆಧಾರದಲ್ಲಿ ಶಾಸಕರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು:...

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ: ಶಿವಮೊಗ್ಗದಲ್ಲಿ AQI ಕಳಪೆ ಮಟ್ಟ, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರ ಸಲಹೆ

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ: ಶಿವಮೊಗ್ಗದಲ್ಲಿ AQI ಕಳಪೆ...

ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ!

ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ! ಬೆಂಗಳೂರು:...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಣ್ಣ ಪ್ರೀತಿಸುವ ದೊಡ್ಡ ವರ್ಗ ಕ್ಷೇತ್ರದಲ್ಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಣ್ಣ ಪ್ರೀತಿಸುವ ದೊಡ್ಡ ವರ್ಗ ಕ್ಷೇತ್ರದಲ್ಲಿದ್ದಾರೆ:...