No menu items!
20.9 C
Munich
Monday, May 25, 2026

BJP ಶಾಸಕ ಮುನಿರತ್ನ ವಿರುದ್ಧ 2 FIR ದಾಖಲು!

Must read

BJP ಶಾಸಕ ಮುನಿರತ್ನ ವಿರುದ್ಧ 2 FIR ದಾಖಲು!

ಬೆಂಗಳೂರು: ಗುತ್ತಿದಾರ ಚಲುವರಾಜು ಅವರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ. ಹೌದು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿದ್ದರು.
ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.
ಶಾಸಕ ಮುನಿರತ್ನ ಅವರು ಸೆಪ್ಟೆಂಬರ್ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article