ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜಿನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಅಭಿಯಾನದ ಮೂಲಕ ಕಾಂಗ್ರೆಸ್ ಸೇರಿದವರ ಸಂಖ್ಯೆ ಹೆಚ್ಚೋ ಅಥವಾ ಕಾಂಗ್ರೆಸ್ ತ್ಯಜಿಸಲಿರುವವರ ಸಂಖ್ಯೆ ಹೆಚ್ಚೋ? ಡಿಜಿಟಲ್ ಅಭಿಯಾನದಲ್ಲಿ ಲಕ್ಷ ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಅಂಕೆ-ಸಂಖ್ಯೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್ ಅವರೇ, ಈಗ ಅನೇಕರು ಪಕ್ಷ ತ್ಯಜಿಸುತ್ತಿದ್ದು, ನಾಳೆ ನಡೆಯಲಿರುವ ರಾಜ್ಯ ಚಿಂತನ ಶಿಬಿರದಲ್ಲಿ ಮುಂದೆ ಪಕ್ಷ ತ್ಯಜಿಸುವವರಿಗಾಗಿ ಹೊಸ ಅಭಿಯಾನ ಘೋಷಿಸುವಿರಾ? ಎಂದು ಲೇವಡಿ ಮಾಡಿದೆ. ಕಪಿಲ್ ಸಿಬಲ್, ಆರ್ ಪಿಎನ್ ಸಿಂಗ್, ಅಶ್ವಿನಿ ಕುಮಾರ್, ಹಾರ್ದಿಕ್ ಪಟೇಲ್, ಸಿಎಂ ಇಬ್ರಾಹಿಂ, ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಚಂದ್ರು, ಈಗ ಬ್ರಿಜೇಶ್ ಕಾಳಪ್ಪ! ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಕಾಂಗ್ರೆಸ್ ಛೋಡೋ ಅಭಿಯಾನವೋ? ಕಾಂಗ್ರೆಸ್ ಪಕ್ಷ ಯಾವ ದಯನೀಯ ಸ್ಥಿತಿ ತಲುಪಿದೆ ಎಂದರೆ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಸಂಖ್ಯೆ ತೋರಿಸಲು ಟಿವಿ, ಫ್ರಿಡ್ಜ್, ಫೋನ್ ಆಮಿಷ ಒಡ್ಡಲಾಗಿತ್ತು. ಈಗ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕೆ ದುಡಿದವರು ಪಕ್ಷ ತ್ಯಜಿಸುತ್ತಿದ್ದಾರೆ. ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.
Latest article
ಪ್ರಜ್ವಲ್ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದಾರೆ !
ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ್ ರಾಜೀನಾಮೆ ಕೊಡಬೇಕೆಂದು ಅವರು ಹೇಳುತ್ತಿದ್ದಾರೆ, ಅಸಲಿಗೆ ರಾಜೀನಾಮೆ ಕೊಡಬೇಕಿರುವುದು ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಮತ್ತು ಸೂರಜ್ ರೇವಣ್ಣ; ನಮ್ಮ ಮನೆ ಮಗನಿಂದ...
ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !
ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಸಿಎಂ, ಡಿಸಿಎಂ ಕಾರಣ !
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ...