ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು

0
45

ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ಮಹತ್ವದ ಸಭೆ ನಡೆಸಿದೆ. ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮತಗಳ ಹಂಚಿಕೆ ಮಾಡಲಾಗಿದೆ. ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಮೂರನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ.

 

 

ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

 

 

 

ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಗೆಲುವಿನ ಲೆಕ್ಕಾಚಾರ ನಡೆಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ತಮ್ಮ ಮೂವರು ಅಭ್ಯರ್ಥಿಗಳಿಗೆ ಮತಗಳ ವಿಂಗಡಣೆ ಮಾಡಿದರು.

 

 

ಉಸ್ತುವಾರಿ ಅರುಣ್ ಸಿಂಗ್ ಮತ್ತು ವೀಕ್ಷಕ ಕಿಶನ್ ರೆಡ್ಡಿ ಜೊತೆ ಸಮಾಲೋಚನೆ ನಡೆಸಿ ಪ್ರತಿಯೊಬ್ಬ ಅಭ್ಯರ್ಥಿಗೂ ಮತಗಳ ವಿಂಗಡಣೆ ಮಾಡಲಾಗಿದ್ದು, ಯಾವ ಅಭ್ಯರ್ಥಿಗೆ ಯಾವ ಶಾಸಕರು ಮತದಾನ ಮಾಡಬೇಕೆಂದು ನಿಗದಿ ಮಾಡಲಾಯಿತು.

LEAVE A REPLY

Please enter your comment!
Please enter your name here