ಬಿಜೆಪಿ ನಾಯಕರಿಗೆ ಟಿಪ್ಪು ಜಯಂತಿಗೆ ಆಹ್ವಾನ…!

0
63

ವಿರೋಧದ ನಡುವೆಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾಗಿದೆ. ಬಿಗಿ ಬಂದೋಬಸ್ತಿನಲ್ಲಿ ನಾಳೆ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಗೂ ಆಹ್ವಾನ ನೀಡಲಾಗಿದೆ…!


ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಪತ್ರಿಕೆಗೆ ತಮ್ಮ ಹೆಸರು ಬೇಡ ಎಂದು ಅಧಿಕೃತ ಪತ್ರ ಕೊಟ್ಟವರ ಹೆಸರನ್ನು ಮಾತ್ರ ಕೈ ಬಿಡುವಂತೆ ಹೇಳಿದ್ದಾರೆ. ಪತ್ರ ಕೊಡದವರ ಹೆಸರನ್ನು ಶಿಷ್ಟಾಚಾರಕ್ಕಾಗಿ ಆಹ್ವಾನ ಪತ್ರಿಕೆಯಲ್ಲಿ ಸೇರಿಸಲಾಗಿದೆ.

ಬೆಂಗಳೂರು ನಗರ ಆಹ್ವಾನ ಪತ್ರಿಕೆಯಲ್ಲಿ ಬಿಜೆಪಿ ನಾಯಕರಾದ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರ ಹೆಸರನ್ನು ಸೇರಿಸಲಾಗಿದೆ.

LEAVE A REPLY

Please enter your comment!
Please enter your name here