ದೊಡ್ಡಬಳ್ಳಾಪುರದಲ್ಲೇ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ ಇನ್ನೂ ಫೈನಲ್ ಆಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆ ಬಿಂಬಿಸಲು ಉದ್ದೇಶಿತ ರಾಜ್ಯಮಟ್ಟದ ಜನೋತ್ಸವ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲೇ ನಡೆಯಲಿದೆ.ಆದರೆ ದಿನಾಂಕ ಇನ್ನೂ ಫೈನಲ್ ಆಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿಕೊಂಡು ಗುರುವಾರದೊಳಗೆ ದಿನಾಂಕ ಅಂತಿಮಗೊಳಿಸಲಿದ್ದಾರೆ. ತಾತ್ಕಾಲಿಕವಾಗಿ ಆ.28 ಎಂದು ನಿಗದಿಪಡಿಸಿದ್ದರೂ ಪಕ್ಷದ ರಾಷ್ಟ್ರೀಯ ನಾಯಕರು ನೀಡಲಿರುವ ಕಾಲಾವಕಾಶದ ಮೇಲೆ ದಿನಾಂಕ ಅಂತಿಮವಾಗಲಿದೆ ಎಂದು ಜನೋತ್ಸವ ಉಸ್ತುವಾರಿ ಜವಾಬ್ದಾರಿ ಹೊತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Latest article
ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜಿನಾಮೆ
ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿದ್ದ ಕೆ.ಪಿ.ನಂಜುಂಡಿ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ...
ಬಿರು ಬಿಸಿಲಿನಲ್ಲೇ ಕುಳಿತು ಸಿಎಂ ನೇತೃತ್ವದಲ್ಲಿ ಕೇಂದ್ರ ವಿರುದ್ಧ ಪ್ರತಿಭಟನೆ
ಬೆಂಗಳೂರು: ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಸಚಿವರು ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಚೊಂಬೇಶ್ವರ ಮೋದಿಗೆ ಎಂಬ ಘೋಷಣೆಗಳನ್ನು ಕೂಗುವ ಮೂಲಕ...
ಕನ್ನಡಕ್ಕೆ ಎಂಟ್ರಿ ಕೊಟ್ಟ ದಕ್ಷಿಣ ಭಾರತದ ನಟಿ !
ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯ ರಾಜೇಶ್ ಉತ್ತರಕಾಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಉತ್ತರಕಾಂಡ ಒಂದು ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್...