ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವಿಟ್ ಪ್ರಹಾರ

Date:

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಅವರ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿತ್ತು. ಅರ್ಕಾವತಿ, ಕೆಪಿಎಸ್ಸಿ, ವಕ್ಫ್ ಆಸ್ತಿ ಕಬಳಿಕೆ, ಭೂ ಒತ್ತುವರಿ, ಸಿವಿಲ್ ಪೊಲೀಸ್ ನೇಮಕಾತಿ ಹಗರಣ ರಾರಾಜಿಸಿದ್ದವು.

ಕಾಂಗ್ರೆಸ್ ವಿರುದ್ಧ ಅಂದೇ ರಾಜ್ಯ ಬಿಜೆಪಿ ಘಟಕ ಧ್ವನಿ ಎತ್ತಿತ್ತು. ಸಿದ್ದರಾಮಯ್ಯ ಸ್ಮೃತಿಗೆ ಗರ ಬಡಿದಿದೆಯೇ ಎಂದು ಟ್ವೀಟ್ ಮಾಡಿದೆ. 2014ರ ಮಾ.22ರಂದು ಕೆಪಿಎಸ್​ಸಿ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿತ್ತು. ಅಂದು ಸಂಜೆಯೇ ನೇಮಕಾತಿ ಹಿಂದಿನ ಕರ್ಮಕಾಂಡದ ಬಂಡವಾಳ ಹೊರಬಿತ್ತು. ಆ ಅಕ್ರಮದಲ್ಲಿ 7 ಮಂದಿಯಷ್ಟೇ ಭಾಗಿ ಎಂದು ತೇಪೆ ಹಚ್ಚಿದ್ರು. ಅದರ ಬೆನ್ನಲ್ಲೇ 362 ಹುದ್ದೆಗಳ ನೇಮಕ ರದ್ದುಗೊಳಿಸಲಿಲ್ಲವೇ? ಎಂದು ಪ್ರಶ್ನಿಸಿದೆ. ಇನ್ನೂ ಸಿದ್ದರಾಮಯ್ಯರು ಲೋಕಾಯುಕ್ತ ಸಮಾಧಿ ಮಾಡಿದ್ದಕ್ಕೆ ಬೆಟ್ಟದಷ್ಟು ಪುರಾವೆಗಳಿವೆ. ಬೊಮ್ಮಾಯಿ ಸರ್ಕಾರ ಎಲ್ಲವನ್ನೂ ಬಯಲಿಗೆ ಎಳೆಯಲಿದೆ. ಏರುಧ್ವನಿಯಲ್ಲಿ ಮಾತಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗಲ್ಲ ಕರಪ್ಟ್​​ ಕಾಂಗ್ರೆಸ್​ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟರ್​ನಲ್ಲಿ ಕಿಡಿಕಾರಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...